AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ!

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 18, 2022 | 2:14 PM

Share

ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಎಸ್​ಐಟಿ ಬಿ ರಿಪೋರ್ಟ್​ ಸಲ್ಲಿಸಲು ಮುಂದಾಗಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ.

ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಸಿ.ಡಿ. ಪ್ರಕರಣದ ತನಿಖೆಗೆ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರ ಸ್ವಯಂಪ್ರೇರಿತವಾಗಿ ಎಸ್​ಐಟಿ ರಚನೆ ಮಾಡಿಲ್ಲ. ಎಸ್​ಐಟಿ ರಚನೆಗೆ ರಾಜಕೀಯ ಒತ್ತಡ ಹೇರಲಾಗಿದೆ. ಇಂತಹ SIT ವರದಿ ಆಧರಿಸಿ ವಿಚಾರಣೆ ನಡೆಸುವುದು ತಪ್ಪು. ಎಸ್​ಐಟಿ ತನಿಖಾ ವರದಿಯ ಮೇಲೆ ನಮಗೆ ನಂಬಿಕೆಯಿಲ್ಲ. ಸಿ.ಡಿ. ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಇಲ್ಲವೆಂದು ಸೆಷನ್ಸ್​ ಕೋರ್ಟ್​ಗೆ ವರದಿ ಸಲ್ಲಿಸಲು ಎಸ್​ಐಟಿ ಮುಂದಾಗಿದೆ. ವರದಿ ಸಲ್ಲಿಸಲು ಎಸ್​ಐಟಿಗೆ ಹೈಕೋರ್ಟ್​ ಸಹ ಸೂಚನೆ ನೀಡಿದೆ. ಇದಕ್ಕೆ ತಾವು ಅಸಮ್ಮತಿ ಸೂಚಿಸುವುದಾಗಿ ಬಾಧಿತ ಯುವತಿ ಸುಪ್ರೀಂ ಕೋರ್ಟ್​ಗೆ ಅಲವತ್ತುಕೊಂಡಿದ್ದರು. ಸಂತ್ರಸ್ತ ಯುವತಿಯ ಮನವಿಯನ್ನು ಪುರಸ್ಕರಿಸಿ, ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ.

SIT ರಚನೆ ಸರಿಯಿದೆಯೇ ಎಂಬುದನ್ನ ಮೊದಲು ಖಾತರಿ ಪಡಿಸಿಕೊಳ್ಳಿ: ಸುಪ್ರೀಂ ಕೋರ್ಟ್​  ಈ ಮಧ್ಯೆ SIT ರಚನೆ ಸರಿಯಿದೆಯೇ ಎಂದು ಖಾತರಿ ಪಡಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್​ಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಎಸ್​ಐಟಿ ರಚನೆ ಬಗ್ಗೆ ಹೈಕೋರ್ಟ್​ ತೀರ್ಮಾನಿಸಿದ ಬಳಿಕವಷ್ಟೇ ಸೆಷನ್ಸ್​ ಕೋರ್ಟ್​ನಲ್ಲಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆ ನಡೆಯಲಿದೆ. ಸಿ.ಡಿ. ಪ್ರಕರಣದ ವಿಚಾರಣೆ ಮಾರ್ಚ್ 9ರಂದು ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಲಿದೆ.

ಇದನ್ನೂ ಓದಿ: ಸಿಡಿ ಬಹಿರಂಗ ಪ್ರಕರಣ: ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಪ್ರಕರಣದ ಮರುತನಿಖೆ ಕೋರಿ ಅರ್ಜಿ ಸಲ್ಲಿಕೆ

ಇದನ್ನೂ ಓದಿ: ಪ್ರಧಾನಿ ಮೋದಿ- ಅಬು ಧಾಬಿ ದೊರೆ ನಡುವೆ ದ್ವಿಪಕ್ಷೀಯ ಶೃಂಗಸಭೆ ಇಂದು; ಇದಕ್ಕಿದೆ ಹೆಚ್ಚು ಮಹತ್ವ! ಏನದು? ಇಲ್ಲಿದೆ ವಿವರ

Published On - 1:57 pm, Fri, 18 February 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ