AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ!

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 18, 2022 | 2:14 PM

Share

ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಎಸ್​ಐಟಿ ಬಿ ರಿಪೋರ್ಟ್​ ಸಲ್ಲಿಸಲು ಮುಂದಾಗಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ.

ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಸಿ.ಡಿ. ಪ್ರಕರಣದ ತನಿಖೆಗೆ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರ ಸ್ವಯಂಪ್ರೇರಿತವಾಗಿ ಎಸ್​ಐಟಿ ರಚನೆ ಮಾಡಿಲ್ಲ. ಎಸ್​ಐಟಿ ರಚನೆಗೆ ರಾಜಕೀಯ ಒತ್ತಡ ಹೇರಲಾಗಿದೆ. ಇಂತಹ SIT ವರದಿ ಆಧರಿಸಿ ವಿಚಾರಣೆ ನಡೆಸುವುದು ತಪ್ಪು. ಎಸ್​ಐಟಿ ತನಿಖಾ ವರದಿಯ ಮೇಲೆ ನಮಗೆ ನಂಬಿಕೆಯಿಲ್ಲ. ಸಿ.ಡಿ. ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಇಲ್ಲವೆಂದು ಸೆಷನ್ಸ್​ ಕೋರ್ಟ್​ಗೆ ವರದಿ ಸಲ್ಲಿಸಲು ಎಸ್​ಐಟಿ ಮುಂದಾಗಿದೆ. ವರದಿ ಸಲ್ಲಿಸಲು ಎಸ್​ಐಟಿಗೆ ಹೈಕೋರ್ಟ್​ ಸಹ ಸೂಚನೆ ನೀಡಿದೆ. ಇದಕ್ಕೆ ತಾವು ಅಸಮ್ಮತಿ ಸೂಚಿಸುವುದಾಗಿ ಬಾಧಿತ ಯುವತಿ ಸುಪ್ರೀಂ ಕೋರ್ಟ್​ಗೆ ಅಲವತ್ತುಕೊಂಡಿದ್ದರು. ಸಂತ್ರಸ್ತ ಯುವತಿಯ ಮನವಿಯನ್ನು ಪುರಸ್ಕರಿಸಿ, ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ.

SIT ರಚನೆ ಸರಿಯಿದೆಯೇ ಎಂಬುದನ್ನ ಮೊದಲು ಖಾತರಿ ಪಡಿಸಿಕೊಳ್ಳಿ: ಸುಪ್ರೀಂ ಕೋರ್ಟ್​  ಈ ಮಧ್ಯೆ SIT ರಚನೆ ಸರಿಯಿದೆಯೇ ಎಂದು ಖಾತರಿ ಪಡಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್​ಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಎಸ್​ಐಟಿ ರಚನೆ ಬಗ್ಗೆ ಹೈಕೋರ್ಟ್​ ತೀರ್ಮಾನಿಸಿದ ಬಳಿಕವಷ್ಟೇ ಸೆಷನ್ಸ್​ ಕೋರ್ಟ್​ನಲ್ಲಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆ ನಡೆಯಲಿದೆ. ಸಿ.ಡಿ. ಪ್ರಕರಣದ ವಿಚಾರಣೆ ಮಾರ್ಚ್ 9ರಂದು ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಲಿದೆ.

ಇದನ್ನೂ ಓದಿ: ಸಿಡಿ ಬಹಿರಂಗ ಪ್ರಕರಣ: ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಪ್ರಕರಣದ ಮರುತನಿಖೆ ಕೋರಿ ಅರ್ಜಿ ಸಲ್ಲಿಕೆ

ಇದನ್ನೂ ಓದಿ: ಪ್ರಧಾನಿ ಮೋದಿ- ಅಬು ಧಾಬಿ ದೊರೆ ನಡುವೆ ದ್ವಿಪಕ್ಷೀಯ ಶೃಂಗಸಭೆ ಇಂದು; ಇದಕ್ಕಿದೆ ಹೆಚ್ಚು ಮಹತ್ವ! ಏನದು? ಇಲ್ಲಿದೆ ವಿವರ

Published On - 1:57 pm, Fri, 18 February 22

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ