AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರುಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ

ಕಾಂಗ್ರೆಸ್​ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ. ಬಿಜೆಪಿ ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ.

ಸುರುಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ
ಮಾಜಿ ಬಿಜೆಪಿ ಶಾಸಕ ರಾಜುಗೌಡ
TV9 Web
| Edited By: |

Updated on:Mar 26, 2024 | 2:32 PM

Share

ಬೆಂಗಳೂರು, ಮಾರ್ಚ್​ 26: ಕಾಂಗ್ರೆಸ್​ (Congress) ಶಾಸಕ ರಾಜ ವೆಂಕಟಪ್ಪ ನಾಯಕ (Raja Venkatappa Nayak) ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ (Surapura Vidhana Sabha Constituency) ಉಪ ಚುನಾವಣೆ ಮೇ 7 ರಂದು ನಡೆಯಲಿದೆ. ಬಿಜೆಪಿ (BJP) ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ (Raju Gowda) ಅವರಿಗೆ ಮತ್ತೆ ಮಣೆ ಹಾಕಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

ನರಸಿಂಹ ನಾಯಕ್ (ರಾಜುಗೌಡ) ಅವರು ಅತಿ ಕಡಿಮೆ ವಯಸ್ಸಿನಲ್ಲಿ ರಾಜಕೀಯಕ್ಕೆ ದುಮುಕಿದರು. ಅವರು 21ನೇ ವಯಸ್ಸಿನಲ್ಲಿ ಕೊಡೇಕಲ್ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದರು. ರಾಜುಗೌಡ ಅವರು 2004ರಲ್ಲಿ ಕನ್ನಡ ನಾಡು ಪಕ್ಷದಿಂದ ಸುರುಪುರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ತಮ್ಮ 25ನೇ ವಯಸ್ಸಿನಲ್ಲೇ ವಿಧಾನಸಭೆಗೆ ಪ್ರವೇಶಿಸುವ ಮೂಲಕ ಆ ಸಮಯದಲ್ಲಿ ಅವರು ಅತ್ಯಂತ ಕಿರಿಯ ಶಾಸಕರಾಗಿದ್ದಾರೆ.

ಇದನ್ನೂ ಓದಿ: ಸುರಪುರದಲ್ಲಿ ಅನುಕಂಪ ಅಲೆ: ಶಾಸಕ ಪುತ್ರ ಅಥವಾ ಸೋತ ಬಿಜೆಪಿ ಅಭ್ಯರ್ಥಿ

2008ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇವರಿಗೆ ಟಿಕೆಟ್‌ ನೀಡಿತು. ಈ ಚುನಾವಣೆಯಲ್ಲಿ ರಾಜುಗೌಡ ಗೆದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಸೋತಿದ್ದರು. ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ಅವರನ್ನು ಸೋಲಿಸುವ ಮೂಲಕ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದರು.

2023ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಅವರ ವಿರುದ್ಧ ರಾಜುಗೌಡ 25 ಸಾವಿರ ಮತಗಳ ಅಂತರದಿಂದ ಸೋತರು. ಚುನಾವಣೆ ನಡೆದು ಕೆಲವೆ ತಿಂಗಳು ಕಳೆದಿದ್ದು, ರಾಜ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾದರು. ಈ ಹಿನ್ನೆಲೆಯಲ್ಲಿ ಇದೀಗ ಉಪ ಚುನಾವಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:29 pm, Tue, 26 March 24

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ