AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರುಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ

ಕಾಂಗ್ರೆಸ್​ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ. ಬಿಜೆಪಿ ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ.

ಸುರುಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ
ಮಾಜಿ ಬಿಜೆಪಿ ಶಾಸಕ ರಾಜುಗೌಡ
TV9 Web
| Updated By: ವಿವೇಕ ಬಿರಾದಾರ

Updated on:Mar 26, 2024 | 2:32 PM

Share

ಬೆಂಗಳೂರು, ಮಾರ್ಚ್​ 26: ಕಾಂಗ್ರೆಸ್​ (Congress) ಶಾಸಕ ರಾಜ ವೆಂಕಟಪ್ಪ ನಾಯಕ (Raja Venkatappa Nayak) ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ (Surapura Vidhana Sabha Constituency) ಉಪ ಚುನಾವಣೆ ಮೇ 7 ರಂದು ನಡೆಯಲಿದೆ. ಬಿಜೆಪಿ (BJP) ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ (Raju Gowda) ಅವರಿಗೆ ಮತ್ತೆ ಮಣೆ ಹಾಕಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

ನರಸಿಂಹ ನಾಯಕ್ (ರಾಜುಗೌಡ) ಅವರು ಅತಿ ಕಡಿಮೆ ವಯಸ್ಸಿನಲ್ಲಿ ರಾಜಕೀಯಕ್ಕೆ ದುಮುಕಿದರು. ಅವರು 21ನೇ ವಯಸ್ಸಿನಲ್ಲಿ ಕೊಡೇಕಲ್ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದರು. ರಾಜುಗೌಡ ಅವರು 2004ರಲ್ಲಿ ಕನ್ನಡ ನಾಡು ಪಕ್ಷದಿಂದ ಸುರುಪುರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ತಮ್ಮ 25ನೇ ವಯಸ್ಸಿನಲ್ಲೇ ವಿಧಾನಸಭೆಗೆ ಪ್ರವೇಶಿಸುವ ಮೂಲಕ ಆ ಸಮಯದಲ್ಲಿ ಅವರು ಅತ್ಯಂತ ಕಿರಿಯ ಶಾಸಕರಾಗಿದ್ದಾರೆ.

ಇದನ್ನೂ ಓದಿ: ಸುರಪುರದಲ್ಲಿ ಅನುಕಂಪ ಅಲೆ: ಶಾಸಕ ಪುತ್ರ ಅಥವಾ ಸೋತ ಬಿಜೆಪಿ ಅಭ್ಯರ್ಥಿ

2008ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇವರಿಗೆ ಟಿಕೆಟ್‌ ನೀಡಿತು. ಈ ಚುನಾವಣೆಯಲ್ಲಿ ರಾಜುಗೌಡ ಗೆದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಸೋತಿದ್ದರು. ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ಅವರನ್ನು ಸೋಲಿಸುವ ಮೂಲಕ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದರು.

2023ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಅವರ ವಿರುದ್ಧ ರಾಜುಗೌಡ 25 ಸಾವಿರ ಮತಗಳ ಅಂತರದಿಂದ ಸೋತರು. ಚುನಾವಣೆ ನಡೆದು ಕೆಲವೆ ತಿಂಗಳು ಕಳೆದಿದ್ದು, ರಾಜ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾದರು. ಈ ಹಿನ್ನೆಲೆಯಲ್ಲಿ ಇದೀಗ ಉಪ ಚುನಾವಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:29 pm, Tue, 26 March 24

ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ