AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ವಿಚಾರ; ಮುಖ್ಯಮಂತ್ರಿ ಭೇಟಿ ಮಾಡಿದ ಸಚಿವ ಸುರೇಶ್ ಕುಮಾರ್

ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ರಾಜ್ಯದ ಮುಖ್ಯಮಂತ್ರಿಗೆ ಕ್ಷೇತ್ರದ ಶಾಸಕರು ಮನವಿ ಮಾಡಿದರು. ಶಿಕ್ಷಕರ ಪದವೀಧರ ಕ್ಷೇತ್ರಗಳ ಶಾಸಕರ ನಿಯೋಗದೊಂದಿಗೆ ಸುರೇಶ್ ಕುಮಾರ್ ತೆರಳಿದ್ದರು.

ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ವಿಚಾರ; ಮುಖ್ಯಮಂತ್ರಿ ಭೇಟಿ ಮಾಡಿದ ಸಚಿವ ಸುರೇಶ್ ಕುಮಾರ್
ಶಿಕ್ಷಣ ಸಚಿವ ಸುರೇಶ್ ಕುಮಾರ್
sandhya thejappa
|

Updated on: May 26, 2021 | 1:07 PM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಒಬ್ಬೊಬ್ಬರು ಒಂದೊಂದು ರೀತಿ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರ ಅನಿವಾರ್ಯವಾಗಿ ಲಾಕ್​ಡೌನ್​ ವಿಧಿಸಿದೆ. ಲಾಕ್​ಡೌನ್​ ಜಾರಿಯಾಗಿದ್ದರಿಂದ ಕೊರೊನಾ ನಿಯಂತ್ರಿಸಲು ಸಾಧ್ಯವಾಗುತ್ತಿದೆ. ಆದರೆ ಇದರ ಬೆನ್ನಲ್ಲೆ ಹಲವು ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಈಗಾಗಲೇ ಖಾಸಗಿ ಶಾಲಾ ಶಿಕ್ಷಕರ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ನೀಡುವ ವಿಚಾರಕ್ಕೆ ಸಂಬಂಧಿಸಿ ಶಿಕ್ಷಕರ ಪದವೀಧರ ಕ್ಷೇತ್ರದ ಶಾಸಕರೊಂದಿಗೆ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದರು.

ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ರಾಜ್ಯದ ಮುಖ್ಯಮಂತ್ರಿಗೆ ಕ್ಷೇತ್ರದ ಶಾಸಕರು ಮನವಿ ಮಾಡಿದರು. ಶಿಕ್ಷಕರ ಪದವೀಧರ ಕ್ಷೇತ್ರಗಳ ಶಾಸಕರ ನಿಯೋಗದೊಂದಿಗೆ ಸುರೇಶ್ ಕುಮಾರ್ ತೆರಳಿದ್ದರು. ಸಚಿವ ಸುರೇಶ್ ಕುಮಾರ್ ಜೊತೆ ವಿಧಾನ ಪರಿಷತ್ತಿನ ಸದಸ್ಯ ಡಾ.ವೈ.ಎ.ನಾರಾಯಣ ಸ್ವಾಮಿ, ಪುಟ್ಟಣ್ಣ, ಅರುಣ ಶಹಾಪುರ, ಶಶೀಲ್ ನಮೋಷಿ, ಸಂಕನೂರ, ಹಙಮಂತ ನಿರಾಣಿ ಹಾಗೂ ಚಿದಾನಂದ ಗೌಡ ಭಾಗಿಯಾಗಿದ್ದರು.

ಶಿಕ್ಷಕ ಸಮುದಾಯದ ಸ್ಥಿತಿ ಶೋಚನೀಯವಾಗಿದೆ. ದೈನಂದಿನ ಜೀವನ ನಿರ್ವಹಣೆಯೂ ದುಸ್ತರವಾಗಿದೆ. ಜೀವನ ನಡೆಸಲು ಶಿಕ್ಷಕ ಸಮುದಾಯದ ಹಲವರು ಹಣ್ಣು, ತರಕಾರಿ ಮಾರುತ್ತಿದ್ದು, ಕೂಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಮಕ್ಕಳ ಹಿತ ಕಾಯುವ ಸಮುದಾಯವನ್ನು ನಾವು ಘನತೆಯಿಂದ ನಡೆಸಿಕೊಳ್ಳುವುದು ಕರ್ತವ್ಯವಾಗಿದೆ. ಸರ್ಕಾರದ ಆರ್ಥಿಕ ಪ್ಯಾಕೇಜ್ ಈ ಸಮುದಾಯಕ್ಕೆ ಆತ್ಮ ವಿಶ್ವಾಸ ತುಂಬಲು ಸಹಕಾರಿಯಾಗಲಿದೆ. ಹೀಗಾಗಿ ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ

30 ದಿನಗಳಲ್ಲಿ ದೇಶದ 30 ನಗರಗಳಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಕೆ; ಟ್ವೀಟ್​ ಮಾಡಿ ಮಾಹಿತಿ ಹಂಚಿಕೊಂಡ ಭಾರತ್ ಬಯೋಟೆಕ್ ಮುಖ್ಯಸ್ಥೆ

ಕಳೆದುಕೊಂಡ ಸ್ನೇಹಿತೆ ಮತ್ತೆ ಸಿಕ್ಕಿದ್ದಾಳೆ, ಕತ್ತೆಯು ಮಗುವನ್ನು ಅಪ್ಪಿಕೊಂಡಿರುವುದು ಹೇಗೆ ನೋಡಿ; ವೈರಲ್​ ಆಯ್ತು ವಿಡಿಯೋ

(Suresh Kumar appealed to chief minister to announce a package for private school teachers)