AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರಕ್ಕೆ ತಜ್ಞರ ಸಮಿತಿ ಆಗಮಿಸಿ, ಸಾವಿಗೆ ಕಾರಣ ಹುಡುಕಲಿದೆ; ಸಚಿವ ಸುರೇಶ್ ಕುಮಾರ್ ಮಾಹಿತಿ

ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರೂ ಚಾಮರಾಜನಗರ ಜಿಲ್ಲಾಡಳಿತ ಪದೇಪದೆ ನಿರ್ಲಕ್ಷ್ಯ ತೋರುತ್ತಿದೆ. 24 ರೋಗಿಗಳು ಮೃತಪಟ್ಟು ಮೂರು ದಿನಗಳಾದರೂ ಮೃತರ ಸಂಬಂಧಿಕರಿಗೆ ಕೊರೊನಾ ಪರೀಕ್ಷೆ ಮಾಡಿಲ್ಲ. ಮತ್ತೊಂದೆಡೆ ಜಿಲ್ಲಾಸ್ಪತ್ರೆ ಮೃತರ ಶವವನ್ನು ಸಂಬಂಧಿಕರಿಗೆ ರಾತ್ರೋರಾತ್ರಿ ಹಸ್ತಾಂತರಿಸಿತು.

ಚಾಮರಾಜನಗರಕ್ಕೆ ತಜ್ಞರ ಸಮಿತಿ ಆಗಮಿಸಿ, ಸಾವಿಗೆ ಕಾರಣ ಹುಡುಕಲಿದೆ; ಸಚಿವ ಸುರೇಶ್ ಕುಮಾರ್ ಮಾಹಿತಿ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
sandhya thejappa
|

Updated on:May 06, 2021 | 11:29 AM

Share

ಚಾಮರಾಜನಗರ: ಕಳೆದ 24 ಗಂಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ 20 ಜನ ಮೃತಪಟ್ಟಿದ್ದಾರೆ ಎಂದು ಮಾತನಾಡಿದ ಸಚಿವ ಸುರೇಶ್ ಕುಮಾರ್, ಈ ಪೈಕಿ 15 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಉಳಿದ ಐವರು ನಾನ್ ಕೊವಿಡ್​ನಿಂದ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವು ಆತಂಕಕಾರಿ. ಹೀಗಾಗಿ ಬೆಂಗಳೂರಿನಿಂದ ತಜ್ಞರ ಸಮಿತಿ ಆಗಮಿಸಲಿದೆ. ಇಂದು ಮತ್ತು ನಾಳೆಯೊಳಗಾಗಿ ವೈದ್ಯರ ತಜ್ಞರ ಸಮಿತಿ ಆಗಮಿಸಲಿದೆ. ಸಮಿತಿ ಆಸ್ಪತ್ರೆಯಲ್ಲಿ ಸಾವಿಗೆ ಕಾರಣ ಹುಡುಕಲಿದೆ. ಜಿಲ್ಲಾಸ್ಪತ್ರೆಯಲ್ಲಿ ಇರುವ ನರ್ಸ್​​ಗಳ ಕೊರತೆಗೆ ಇಂದು ಪರಿಹಾರ ಸಿಗಲಿದೆ. ಇರುವ ನರ್ಸ್​ಗಳಲ್ಲಿ ಕೆಲವರಿಗೆ ಕೊವಿಡ್ ಸೋಂಕು ತಗುಲಿದೆ ಎಂದು ಹೇಳಿದರು.

ಚಾಮರಾಜನಗರ ಜಿಲ್ಲಾಡಳಿತದಿಂದ ಪದೇಪದೆ ನಿರ್ಲಕ್ಷ್ಯ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರೂ ಚಾಮರಾಜನಗರ ಜಿಲ್ಲಾಡಳಿತ ಪದೇಪದೆ ನಿರ್ಲಕ್ಷ್ಯ ತೋರುತ್ತಿದೆ. 24 ರೋಗಿಗಳು ಮೃತಪಟ್ಟು ಮೂರು ದಿನಗಳಾದರೂ ಮೃತರ ಸಂಬಂಧಿಕರಿಗೆ ಕೊರೊನಾ ಪರೀಕ್ಷೆ ಮಾಡಿಲ್ಲ. ಮತ್ತೊಂದೆಡೆ ಜಿಲ್ಲಾಸ್ಪತ್ರೆ ಮೃತರ ಶವವನ್ನು ಸಂಬಂಧಿಕರಿಗೆ ರಾತ್ರೋರಾತ್ರಿ ಹಸ್ತಾಂತರಿಸಿತು. ಮೃತಪಟ್ಟರು ಎಂಬ ನೋವಿನಲ್ಲಿ ಸಂಬಂಧಿಕರು ಪಿಪಿಇ ಕಿಟ್ ಧರಿಸದೇ ಹಾಗೆಯೇ ಎತ್ತು ಕೊಂಡು ಹೋಗಿದ್ದರು.

ಅಂತ್ಯಸಂಸ್ಕಾರ ಮಾಡಿದ ಬಳಿಕ ಮೃತರ ಸಂಬಂಧಿಗಳ ಎದೆಯಲ್ಲಿ ಡವಡವ ಆರಂಭವಾಗಿದೆ. ಆದರೆ ಇನ್ನೂ ಸಂಬಂಧಿಕರಿಗೆ ಕೊರೊನಾ ಪರೀಕ್ಷೆ ನಡೆಸಿಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದ್ದು, ಮೃತರ ಕುಟುಂಬಸ್ಥರಲ್ಲಿ ಕೊರೊನಾ ಆತಂಕ ಶುರುವಾಗಿದೆ.

ಇದನ್ನೂ ಓದಿ

ಬೀದಿಗೆ ಬಂದ ಹೂವು ಬೆಳೆಗಾರರ ಬದುಕು; ರಸ್ತೆಯಲ್ಲಿಯೇ ಹೂವುಗಳನ್ನು ಸುರಿದು ರೈತರ ಆಕ್ರೋಶ

ಸಿಎಂ ನಿವಾಸ ಕಾವೇರಿ ಬಳಿ ಬಂದು, ಪತಿಗೆ ಬೆಡ್​ ನೀಡುವಂತೆ ಅಂಗಲಾಚಿದ ಮಹಿಳೆ; ಆಸ್ಪತ್ರೆ ತಲುಪುವ ಮುನ್ನವೇ ಪತಿ ಸಾವು

(Suresh Kumar says Expert panel visits chamarajanagar to determine cause of death)

Published On - 11:22 am, Thu, 6 May 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ