AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ ಮಿಶ್ರಿತ ಕಿವಿಮಾತು

PSI Recruitment Scam: ಶೀಘ್ರವೇ ದಿವ್ಯಾ ಹಾಗರಗಿ ಅವರನ್ನು ಬಂಧಿಸಲಾಗುವುದು. ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ. ಅವರು ಊರು ಬಿಟ್ಟಿದ್ದಾರೆ. ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಕೊಟ್ಟಿದ್ದಾರೆ. ಶೀಘ್ರವೇ ಅವ್ರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ. ಗೌರವಯುತವಾಗಿ ಬಂದು ಶರಣಾಗಬೇಕು ಎಂದು ದಿವ್ಯಾ ಹಾಗರಗಿಗೆ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ ಮಿಶ್ರಿತ ಕಿವಿಮಾತು
ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ದಿವ್ಯಾ ಹಾಗರಗಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಮಿಶ್ರಿತ ಕಿವಿಮಾತು
TV9 Web
| Updated By: ಸಾಧು ಶ್ರೀನಾಥ್​|

Updated on:Apr 28, 2022 | 1:20 PM

Share

ಬೆಂಗಳೂರು: ಕರ್ನಾಟಕ ಪೊಲೀಸ್​ ಸಬ್​ ಇನ್ಸ್ಪೆಕ್ಟರ್​ ನೇಮಕಾತಿ ಪ್ರಕ್ರಿಯೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅಷ್ಟೇ ಸಂಘಟಿತವಾಗಿ ಅಪರಾಧವೆಸಗಿರುವ ಪ್ರಮುಖ ಆರೋಪಿ ಎನ್ನಲಾದ ಕಲಬುರ್ಗಿಯ ದಿವ್ಯಾ ಹಾಗರಗಿ 3 ವಾರ ಆಯ್ತು ಪರಾರಿಯಾಗಿ. ಇನ್ನೂ ಅವರ ವೇರ್ ಎಬೌಟ್ಸ್​ ಬಗ್ಗೆ ರಾಜ್ಯ ಪೊಲೀಸರಿಗೆ ಕಿಂಚಿತ್ತೂ ಸುಳಿವು ದೊರೆತಿಲ್ಲ. ಈ ಮಧ್ಯೆ, ಖುದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೆ ಆರೋಪಿ ದಿವ್ಯಾ ಹಾಗರಗಿಗೆ (Divya Hagaragi) ಎಚ್ಚರಿಕೆ ಮಿಶ್ರಿತ ಕಿವಿಮಾತು ಹೇಳಿದ್ದಾರೆ. 545 ಪಿಎಸ್​ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಪ್ರತಿಕ್ರಿಯೆ ನೀಡಿದ್ದು ಶೀಘ್ರವೇ ದಿವ್ಯಾ ಹಾಗರಗಿ ಅವರನ್ನು ಬಂಧಿಸಲಾಗುವುದು. ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ. ಅವರು ಊರು ಬಿಟ್ಟಿದ್ದಾರೆ. ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಕೊಟ್ಟಿದ್ದಾರೆ. ಶೀಘ್ರವೇ ಅವ್ರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ. ಗೌರವಯುತವಾಗಿ ಬಂದು ಶರಣಾಗಬೇಕು ಎಂದು ದಿವ್ಯಾ ಹಾಗರಗಿಗೆ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ (PSI Recruitment Scam) .

ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಮುಖ್ಯಮಂತ್ರಿ ಗಮನಕ್ಕೆ ತಂದು ಮಾಡಿದ್ದೇನೆ. ಹಣಕ್ಕಾಗಿ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್‌ ಅನ್ನು ಹೊರಗೆ ತರುತ್ತೇವೆ ಎಂದು ಸಚಿವ ಜ್ಞಾನೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು.

ಶಾಸಕ ಪ್ರಿಯಾಂಕ್ ರನ್ನು ಪೊಲೀಸರು ಅರೆಸ್ಟ್ ಮಾಡ್ತಾರಾ? ವಿಚಾರಣೆ ತಾನೇ ಮಾಡೋದು.. ವಿಚಾರಣೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಾಜರಾಗದ ವಿಚಾರ ಪ್ರಸ್ತಾಪಿಸಿದಾಗ ಪ್ರಿಯಾಂಕ್ ಖರ್ಗೆ ಅನೇಕ ಆರೋಪ ಮಾಡಿದ್ದಾರೆ. ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಅವ್ರು ತನಿಖೆಗೆ ಸಹಕಾರ ಕೊಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. ನನ್ನ ಬಳಿ ದಾಖಲೆ ಇದೆ ಅನ್ನುತ್ತಾರೆ! ಅವ್ರು ದಾಖಲೆ ಕೊಡಬಹುದು ಅಲ್ವಾ!? ಅವ್ರ ತಂದೆ ಎಷ್ಟು ದೊಡ್ಡವರು. ಅವರಿಗೆ ತನಿಖೆ ಬಗ್ಗೆ ಗೊತ್ತಿಲ್ವಾ? ಅವರನ್ನು ಏನು ಅರೆಸ್ಟ್ ಮಾಡ್ತಾರಾ? ವಿಚಾರಣೆ ತಾನೇ ಮಾಡೋದು. ಅವರ ಬಳಿ ಇರೋ ದಾಖಲೆ ಕೊಡಲಿ. ಬುಟ್ಟಿಯಲ್ಲಿ ಹಾವು ಇಟ್ಟುಕೊಂಡು ಬಿಡ್ತೀನಿ ಅನ್ನೋದು ಎಷ್ಟು ಸರಿ? ಎಂದು ಸಚಿವ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಐಪಿ ಎಸ್​ ಅಧಿಕಾರಿ ಅಮೃತ್ ಪಾಲ್ ವರ್ಗಾವಣೆ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವರು ವರ್ಗಾವಣೆ ಸಹಜ ಪ್ರಕ್ರಿಯೆ. ಹಾಗಂತ ಅವರನ್ನು ಅಪರಾಧಿ ಅನ್ನೋದು ಸರಿಯಲ್ಲ. ಅವರ ಹೆಸರು ತನಿಖೆಯಲ್ಲಿ ಬಂದಿಲ್ಲ. ತನಿಖೆಯಲ್ಲಿ ಯಾರ ಹೆಸರು ಬರುತ್ತೋ ಅವರೇ ಮುಂದೆ ತಪ್ಪಿತಸ್ಥರು ಆಗ್ತಾರೆ ಎಂದು ಸಚಿವ ಆರಗ ಹೇಳಿದರು.

Also Read: ಮತ್ತೊಂದು ದಿವ್ಯ ಕೊಡುಗೆ! ’6 ವರ್ಷ ಹಿಂದೆಯೇ ದಿವ್ಯಾ ಹಾಗರಗಿ ಮೂಲಕ 16 ಪಿಎಸ್​ಐಗಳು ಆಯ್ಕೆಯಾಗಿದ್ದಾರೆ ಮಹಾಸ್ವಾಮಿ!’

Also Read: PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!

Published On - 1:11 pm, Thu, 28 April 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?