Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 15, 2024 | 10:47 PM

ಬೆಂಗಳೂರು, ಸೆಪ್ಟೆಂಬರ್​ 15: ಮಂಡ್ಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ (Mandya Violence) ಘಟನೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ನಾಗಮಂಗಲ ಗಲಾಟೆ‌ ಹಿಂದೆ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂಬ ಶಂಕೆ ವ್ಯಕ್ತ ಬೆನ್ನಲ್ಲೇ ಪ್ರಕರಣವನ್ನ ಎನ್​​ಐಎಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರ್‌. ಅಶೋಕ್‌, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್​​ಐ, ಕೆಇಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಎಂದಿದ್ದಾರೆ.

ಆರ್‌. ಅಶೋಕ್‌ ಟ್ವೀಟ್​

ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್​ಐಆರ್​ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ