AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
ಗಂಗಾಧರ​ ಬ. ಸಾಬೋಜಿ
|

Updated on: Sep 15, 2024 | 10:47 PM

Share

ಬೆಂಗಳೂರು, ಸೆಪ್ಟೆಂಬರ್​ 15: ಮಂಡ್ಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ (Mandya Violence) ಘಟನೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ನಾಗಮಂಗಲ ಗಲಾಟೆ‌ ಹಿಂದೆ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂಬ ಶಂಕೆ ವ್ಯಕ್ತ ಬೆನ್ನಲ್ಲೇ ಪ್ರಕರಣವನ್ನ ಎನ್​​ಐಎಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರ್‌. ಅಶೋಕ್‌, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್​​ಐ, ಕೆಇಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಎಂದಿದ್ದಾರೆ.

ಆರ್‌. ಅಶೋಕ್‌ ಟ್ವೀಟ್​

ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್​ಐಆರ್​ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ