AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
ಗಂಗಾಧರ​ ಬ. ಸಾಬೋಜಿ
|

Updated on: Sep 15, 2024 | 10:47 PM

Share

ಬೆಂಗಳೂರು, ಸೆಪ್ಟೆಂಬರ್​ 15: ಮಂಡ್ಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ (Mandya Violence) ಘಟನೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ನಾಗಮಂಗಲ ಗಲಾಟೆ‌ ಹಿಂದೆ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂಬ ಶಂಕೆ ವ್ಯಕ್ತ ಬೆನ್ನಲ್ಲೇ ಪ್ರಕರಣವನ್ನ ಎನ್​​ಐಎಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರ್‌. ಅಶೋಕ್‌, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್​​ಐ, ಕೆಇಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಎಂದಿದ್ದಾರೆ.

ಆರ್‌. ಅಶೋಕ್‌ ಟ್ವೀಟ್​

ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್​ಐಆರ್​ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?