AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಸ್ಪದ ಸಾವು ಪ್ರಕರಣ: ಆಕೆ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಯುವಕನಿಂದ ಕೊಲೆ

ಎರಡು ದಿನದ ಹಿಂದೆ ಮೈಸೂರಿನ ಹೊಟೇಲ್​ ರೂಮ್​ನಲ್ಲಿ ಯುವತಿ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಯುವತಿ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಕೋಪಗೊಂಡ ಹಿನ್ನೆಲೆ ಕೋಪಗೊಂಡ ಯುವಕ ಜಗಳವಾಡುವ ವೇಳೆ ಕೊಲೆ ಮಾಡಿದ್ದಾನೆ.

ಅನುಮಾನಸ್ಪದ ಸಾವು ಪ್ರಕರಣ: ಆಕೆ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಯುವಕನಿಂದ ಕೊಲೆ
ಆರೋಪಿ ಆಶಿಕ್ ಮತ್ತು ಕೊಲೆಯಾದ ಯುವತಿ ಅಪೂರ್ವ
TV9 Web
| Edited By: Rakesh Nayak Manchi|

Updated on: Sep 03, 2022 | 8:23 AM

Share

ಮೈಸೂರು: ಎರಡು ದಿನದ ಹಿಂದೆ ಹೊಟೇಲ್​ ರೂಮ್​ನಲ್ಲಿ ಯುವತಿ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಯುವತಿಯೊಂದಿಗೆ ಹೊಟೇಲ್​ನಲ್ಲಿದ್ದ ಯುವಕ ವಿವಾಹಿತ ಎಂಬ ಅಂಶ ತಿಳಿದುಬಂದಿದ್ದು, ಆಕೆಯೊಂದಿಗೆ ಸ್ನೇಹ ಸಲುಗೆಯಿಂದ ಸುತ್ತಾಡುತ್ತಿದ್ದ. ಆದರೆ ಯುವತಿ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದೇ ಕೊಲೆಗೆ ಕಾರಣ ಎಂಬೂದಿಗ ತಿಳಿದುಬಂದ ಮಾಹಿತಿ.

ವಿವಾಹಿತ ಯುವಕ ಆಶಿಕ್, ಒಂದೂವರೆ ವರ್ಷದ ಹಿಂದೆ ಅಪೂರ್ವ ಶೆಟ್ಟಿ ಪರಿಚಯ ಬೆಳೆಸಿಕೊಂಡಿದ್ದಾನೆ. ಆಕೆಯೊಂದಿಗೆ ಸ್ನೇಹ ಸಲುಗೆ ಅಂತಾ ಸುತ್ತಾಡುತ್ತಿದ್ದನು. ಆದರೆ ಕೆಲವು ದಿನಗಳ ಹಿಂದೆ ಅಪೂರ್ವ ಬೇರೆಯವರ ಜೊತೆ ಸ್ನೇಹ ಬೆಳೆಸಿದ್ದಳು. ಇದರಿಂದ ಅಸಮಾಧಾನಗೊಂಡಿದ್ದ ಆಶಿಕ್, ಆಕೆಯೊಂದಿಗೆ ಜಗಳವಾಡಿದ್ದಾನೆ. ಅಲ್ಲದೆ ಕೊಲೆ ಮಾಡಲು ನಿರ್ಧರಿಸಿದ್ದನು.

ಅದರಂತೆ ಆ.29ರಂದು ಪ್ರತಿಷ್ಠಿತ ಹೊಟೇಲ್​ನಲ್ಲಿ ಆಶಿಕ್ ಮತ್ತು ಅಪೂರ್ವ ರೂಮ್ ಮಾಡಿಕೊಂಡಿದ್ದರು. ಈ ವೇಳೆ ಅವರ ನಡುವೆ ಮತ್ತೆ ಜಗಳ ನಡೆದಿದ್ದು, ಈ ವೇಳೆ ಕೋಪದಿಂದ ಆಶಿಕ್ ಯುವತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಆರೋಪಿ ಆಶಿಕ್ ಪೊಲೀಸರ ಮುಂದೆ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಸದ್ಯ ಪ್ರಕರಣ ಸಂಬಂಧ ದೇವರಾಜ ಠಾಣಾ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

ಏನಿದು ಪ್ರಕರಣ?

ಮೈಸೂರು ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಆ.29ರಂದು ವಾಸ್ತವ್ಯ ಹೂಡಿದ್ದ ಯುವತಿ  ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಜೊತೆಯಲ್ಲಿದ್ದ ಯುವಕ ಪರಾರಿಯಾಗಿದ್ದನು. ಯುವತಿ ಸಾವನ್ನಪ್ಪಿರುವ ಬಗ್ಗೆ ಹೋಟೆಲ್ ನ ಆಡಳಿತ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ಕೊಟ್ಟ ಪೊಲೀಸರು, ಯುವತಿಯ ಗುರುತು ಪತ್ತೆಹಚ್ಚಿದ್ದರು. ಅಲ್ಲದೆ ಕೊಲೆ ಶಂಕೆ ವ್ಯಕ್ತಪಡಿಸಿದ್ದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ