ಅನುಮಾನಸ್ಪದ ಸಾವು ಪ್ರಕರಣ: ಆಕೆ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಯುವಕನಿಂದ ಕೊಲೆ

ಎರಡು ದಿನದ ಹಿಂದೆ ಮೈಸೂರಿನ ಹೊಟೇಲ್​ ರೂಮ್​ನಲ್ಲಿ ಯುವತಿ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಯುವತಿ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಕೋಪಗೊಂಡ ಹಿನ್ನೆಲೆ ಕೋಪಗೊಂಡ ಯುವಕ ಜಗಳವಾಡುವ ವೇಳೆ ಕೊಲೆ ಮಾಡಿದ್ದಾನೆ.

ಅನುಮಾನಸ್ಪದ ಸಾವು ಪ್ರಕರಣ: ಆಕೆ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಯುವಕನಿಂದ ಕೊಲೆ
ಆರೋಪಿ ಆಶಿಕ್ ಮತ್ತು ಕೊಲೆಯಾದ ಯುವತಿ ಅಪೂರ್ವ
Edited By: Rakesh Nayak Manchi

Updated on: Sep 03, 2022 | 8:23 AM

ಮೈಸೂರು: ಎರಡು ದಿನದ ಹಿಂದೆ ಹೊಟೇಲ್​ ರೂಮ್​ನಲ್ಲಿ ಯುವತಿ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಯುವತಿಯೊಂದಿಗೆ ಹೊಟೇಲ್​ನಲ್ಲಿದ್ದ ಯುವಕ ವಿವಾಹಿತ ಎಂಬ ಅಂಶ ತಿಳಿದುಬಂದಿದ್ದು, ಆಕೆಯೊಂದಿಗೆ ಸ್ನೇಹ ಸಲುಗೆಯಿಂದ ಸುತ್ತಾಡುತ್ತಿದ್ದ. ಆದರೆ ಯುವತಿ ಬೇರೊಬ್ಬನೊಂದಿಗೆ ಸ್ನೇಹ ಬೆಳೆಸಿದ್ದೇ ಕೊಲೆಗೆ ಕಾರಣ ಎಂಬೂದಿಗ ತಿಳಿದುಬಂದ ಮಾಹಿತಿ.

ವಿವಾಹಿತ ಯುವಕ ಆಶಿಕ್, ಒಂದೂವರೆ ವರ್ಷದ ಹಿಂದೆ ಅಪೂರ್ವ ಶೆಟ್ಟಿ ಪರಿಚಯ ಬೆಳೆಸಿಕೊಂಡಿದ್ದಾನೆ. ಆಕೆಯೊಂದಿಗೆ ಸ್ನೇಹ ಸಲುಗೆ ಅಂತಾ ಸುತ್ತಾಡುತ್ತಿದ್ದನು. ಆದರೆ ಕೆಲವು ದಿನಗಳ ಹಿಂದೆ ಅಪೂರ್ವ ಬೇರೆಯವರ ಜೊತೆ ಸ್ನೇಹ ಬೆಳೆಸಿದ್ದಳು. ಇದರಿಂದ ಅಸಮಾಧಾನಗೊಂಡಿದ್ದ ಆಶಿಕ್, ಆಕೆಯೊಂದಿಗೆ ಜಗಳವಾಡಿದ್ದಾನೆ. ಅಲ್ಲದೆ ಕೊಲೆ ಮಾಡಲು ನಿರ್ಧರಿಸಿದ್ದನು.

ಅದರಂತೆ ಆ.29ರಂದು ಪ್ರತಿಷ್ಠಿತ ಹೊಟೇಲ್​ನಲ್ಲಿ ಆಶಿಕ್ ಮತ್ತು ಅಪೂರ್ವ ರೂಮ್ ಮಾಡಿಕೊಂಡಿದ್ದರು. ಈ ವೇಳೆ ಅವರ ನಡುವೆ ಮತ್ತೆ ಜಗಳ ನಡೆದಿದ್ದು, ಈ ವೇಳೆ ಕೋಪದಿಂದ ಆಶಿಕ್ ಯುವತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಆರೋಪಿ ಆಶಿಕ್ ಪೊಲೀಸರ ಮುಂದೆ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಸದ್ಯ ಪ್ರಕರಣ ಸಂಬಂಧ ದೇವರಾಜ ಠಾಣಾ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

ಏನಿದು ಪ್ರಕರಣ?

ಮೈಸೂರು ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಆ.29ರಂದು ವಾಸ್ತವ್ಯ ಹೂಡಿದ್ದ ಯುವತಿ  ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಜೊತೆಯಲ್ಲಿದ್ದ ಯುವಕ ಪರಾರಿಯಾಗಿದ್ದನು. ಯುವತಿ ಸಾವನ್ನಪ್ಪಿರುವ ಬಗ್ಗೆ ಹೋಟೆಲ್ ನ ಆಡಳಿತ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ಕೊಟ್ಟ ಪೊಲೀಸರು, ಯುವತಿಯ ಗುರುತು ಪತ್ತೆಹಚ್ಚಿದ್ದರು. ಅಲ್ಲದೆ ಕೊಲೆ ಶಂಕೆ ವ್ಯಕ್ತಪಡಿಸಿದ್ದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us