ಅನುಮಾನಾಸ್ಪದ ಸಾವು: ಸ್ವಗ್ರಾಮದಲ್ಲಿ ನಡೆಯಿತು ಪಿಎಸ್ಐ ಪರಶುರಾಮ ಅಂತ್ಯಸಂಸ್ಕಾರ

ಯಾದಗಿರಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪಿಎಸ್ಐ ಪರಶುರಾಮ ಅವರ ಅಂತ್ಯಸಂಸ್ಕಾರವನ್ನು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಸ್ವಗ್ರಾಮದಲ್ಲಿ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ನೆರವೇರಿಸಲಾಗಿದೆ. ಆ ಮೂಲಕ ಪಿಎಸ್ಐ ಪರಶುರಾಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಅಂತ್ಯಕ್ರಿಯೆಯಲ್ಲಿ ಸಚಿವರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.

ಅನುಮಾನಾಸ್ಪದ ಸಾವು: ಸ್ವಗ್ರಾಮದಲ್ಲಿ ನಡೆಯಿತು ಪಿಎಸ್ಐ ಪರಶುರಾಮ ಅಂತ್ಯಸಂಸ್ಕಾರ
ಅನುಮಾನಾಸ್ಪದ ಸಾವು: ಸ್ವಗ್ರಾಮದಲ್ಲಿ ನಡೆಯಿತು ಪಿಎಸ್ಐ ಪರಶುರಾಮ ಅಂತ್ಯಸಂಸ್ಕಾರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 03, 2024 | 10:39 PM

ಕೊಪ್ಪಳ, ಆಗಸ್ಟ್​ 3: ಯಾದಗಿರಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪದ ಪಿಎಸ್​ಐ ಪರಶುರಾಮ (PSI Parasurama) ಅವರು ಇದೀಗ ಮಣ್ಣಲ್ಲಿ ಮಣ್ಣಾಗಿದ್ದಾರೆ. ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಸ್ವಗ್ರಾಮದಲ್ಲಿ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಅಂತ್ಯಸಂಸ್ಕಾರ (cremated) ಮಾಡಲಾಗಿದೆ. ಅಂತ್ಯಕ್ರಿಯೆ ಮುನ್ನ ಸರ್ಕಾರಿ ಶಾಲೆ ಆವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಜನರು ದರ್ಶನ ಪಡೆದುಕೊಂಡರು. ಅಂತ್ಯಕ್ರಿಯೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದರು.

ವರ್ಗಾವಣೆ ವಿಚಾರದಲ್ಲಿ ನೊಂದಿದ್ರಾ ಪರಶುರಾಮ?

ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ನಿವಾಸಿಯಾಗಿದ್ದ ಪರಶುರಾಮ, ಯಾದಗಿರಿಯಲ್ಲಿ ಪಿಎಸ್ಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ವರ್ಗಾವಣೆ ವಿಚಾರದಲ್ಲಿ ನೊಂದಿದ್ದ ಪರಶುರಾಮ, ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರ ಕಾರಣ ಅಂತ ಪರಶುರಾಮ ಕುಟುಂಬದವರು ಆರೋಪಿಸಿದ್ದು, ಈ ಬಗ್ಗೆ ದೂರು ಕೂಡ ನೀಡಿದ್ದಾರೆ.

ಇದನ್ನೂ ಓದಿ: PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ

ಪರಶುರಾಮ ಅವರ ಪ್ರಾರ್ಥಿವ ಶರೀರವನ್ನು ಇಂದು ಸಂಜೆ ಆರು ಗಂಟೆಗೆ ಅವರ ಹುಟ್ಟುರಾದ ಸೋಮನಾಳ ಗ್ರಾಮಕ್ಕೆ ತರಲಾಯಿತು. ಪರಶುರಾಮ ಅವರ ಪ್ರಾರ್ಥಿವ ಶರೀರಿ ಬರ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಗ್ರಾಮಕ್ಕೆ ಹೆಮ್ಮೆ ತರುವಂತೆ ಇದ್ದ ಪರಶುರಾಮನ ಸಾವಿನ ಸುದ್ದಿ ಕೇಳಿದ್ದ ಗ್ರಾಮದ ಜನರು, ಅವರ ಮನೆಗೆ ಧಾವಿಸಿ ಬಂದಿದ್ದರು. ಸುತ್ತಮುತ್ತಲಿನ ಗ್ರಾಮಗಳಿಂದ ಕೂಡ ನೂರಾರು ಜನರು ಆಗಮಸಿದ್ದರು. ಕೆಲ ಹೊತ್ತು ಪರಶುರಾಮ ಮನೆಯಲ್ಲಿ ಪ್ರಾರ್ಥಿವ ಶರೀರಿದ ದರ್ಶನಕ್ಕೆ ಕುಟುಂಬಸ್ಥರಿಗೆ ಅವಕಾಶ ನೀಡಲಾಯಿತು. ನಂತರ ಪ್ರಾರ್ಥಿವ ಶರೀರಿವನ್ನು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಮೈದಾನಕ್ಕೆ ತರಲಾಯಿತು.

ಈ ಸಮಯದಲ್ಲಿ ಛಲವಾದಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ತಪ್ಪಿತಸ್ಥರ ವಿರುದ್ದ ಕ್ರಮವಾಗಬೇಕು, ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು ಅಂತ ಆಗ್ರಹಿಸಿದ್ದರು. ಮನೆಯಿಂದ ಹೊರಟಿದ್ದ ಪ್ರಾರ್ಥಿವ ಶರೀರವನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಜೆ ಆರು ಮೂವತ್ತರ ಸಮಯಕ್ಕೆ ತರಲಾಯಿತು. ಸರ್ಕಾರಿ ಶಾಲೆಯಲ್ಲಿ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ಮೂರು ಸುತ್ತು ಗುಂಡು ಹಾರಿಸಿ ಪೊಲೀಸರು ಗೌರವ ವಂದನೆ ಸಲ್ಲಿಸಿದರು.

ಸಚಿವ ಶಿವರಾಜ್ ತಂಗಡಗಿ ಸೇರಿ ಹಿರಿಯ ಅಧಿಕಾರಿಗಳು ಭಾಗಿ

ಈ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು. ಕೆಲ ಹೊತ್ತು ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಪರಶುರಾಮ ಪ್ರಾರ್ಥಿವ ಶರೀರಿದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಬಂದಿದ್ದ ಸಾವಿರಾರು ಜನರು ಅಂತಿಮ ದರ್ಶನ ಪಡೆದರು. ನಂತರ ಪರಶುರಾಮ ಅವರ ಕುಟುಂಬದ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ: ಯಾದಗಿರಿ ಪಿಎಸ್ಐ ಸಾವು ಪ್ರಕರಣ: ಕಡುಬಡತನದಲ್ಲಿ ಬೆಳೆದು ಒಂದಲ್ಲಾ ಎಂಟು ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿದ್ದ ಪರಶುರಾಮ!

ಎಂಟು ಸರ್ಕಾರಿ ನೌಕರಿ ಪಡೆದಿದ್ದ ಪರಶುರಾಮ, ಕೊನೆಗೆ ಇಷ್ಟಪಟ್ಟು ಪಿಎಸ್ಐ ನೌಕರಿ ಪಡೆದು ಕೆಲಸ ಮಾಡುತ್ತಿದ್ದರು. ಆದರೆ ವರ್ಗಾವಣೆ ಪರಶುರಾಮನನ್ನು ಬಲಿ ಪಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಪರಶುರಾಮ ಸಾವಿಗೆ ಕಾರಣರಾದವರಿಗೆ ಕಠೀಣ ಶಿಕ್ಷೆಯಾಗಬೇಕು ಎಂಬುವುದು ಕುಟ್ಟುಂಬದವರ ಮಾತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?