AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರ ಪಕ್ಕದ ಹನುಮಂತನಗರದಲ್ಲಿ ಬಾಂಬ್ ಪತ್ತೆ?

ಬೆಂಗಳೂರು: ಕೊರೊನಾ ಲಾಕ್​ಡೌನ್​ನ ಸಂದಿಗ್ಧ ಸಮಯದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದೆ. ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿ‌ಯ ಕತ್ರಿಗುಪ್ಪೆ-ಅಶೋಕನಗರ ಜಂಕ್ಷನ್ ಬಳಿ ವಸ್ತು ಪತ್ತೆಯಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಅನುಮಾನಾಸ್ಪದ ವಸ್ತುವನ್ನು ಹನುಮಂತನಗರ ಬಳಿಯ ಕೆಂಪೇಗೌಡ ಮೈದಾನಕ್ಕೆ ಪೊಲೀಸರು ರವಾನಿಸಿದರು. ಬೆಳಗ್ಗೆ 10.30ರ ಸುಮಾರಿಗೆ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಬಾಕ್ಸ್​ನಲ್ಲಿ ಪಟಾಕಿಗಳು ತುಂಬಿರುವ ಶಂಕೆ ವ್ಯಕ್ತವಾಗಿತ್ತು. ಸಿಕ್ಕಿರುವ ವಸ್ತು ಕುರಿತು FSL ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ […]

ಶ್ರೀನಗರ ಪಕ್ಕದ ಹನುಮಂತನಗರದಲ್ಲಿ ಬಾಂಬ್ ಪತ್ತೆ?
ಸಾಧು ಶ್ರೀನಾಥ್​
|

Updated on:Apr 30, 2020 | 3:05 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ನ ಸಂದಿಗ್ಧ ಸಮಯದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದೆ. ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿ‌ಯ ಕತ್ರಿಗುಪ್ಪೆ-ಅಶೋಕನಗರ ಜಂಕ್ಷನ್ ಬಳಿ ವಸ್ತು ಪತ್ತೆಯಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಅನುಮಾನಾಸ್ಪದ ವಸ್ತುವನ್ನು ಹನುಮಂತನಗರ ಬಳಿಯ ಕೆಂಪೇಗೌಡ ಮೈದಾನಕ್ಕೆ ಪೊಲೀಸರು ರವಾನಿಸಿದರು.

ಬೆಳಗ್ಗೆ 10.30ರ ಸುಮಾರಿಗೆ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಬಾಕ್ಸ್​ನಲ್ಲಿ ಪಟಾಕಿಗಳು ತುಂಬಿರುವ ಶಂಕೆ ವ್ಯಕ್ತವಾಗಿತ್ತು. ಸಿಕ್ಕಿರುವ ವಸ್ತು ಕುರಿತು FSL ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಐಸ್ ಕ್ರೀಂ ಡಬ್ಬಿಯಲ್ಲಿ ಪೊಟ್ಯಾಷಿಯಂ ನೈಟ್ರೇಟ್: ಐಸ್ ಕ್ರೀಂ ಡಬ್ಬಿಯಲ್ಲಿ ಪೊಟ್ಯಾಷಿಯಂ ನೈಟ್ರೇಟ್ ತುಂಬಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಫೋಟಕ ಮಾದರಿ ವಸ್ತು ವಶಕ್ಕೆ ಪಡೆಯಲಾಗಿದೆ. ಈಗಾಗಲೇ ಆ ವಸ್ತುವನ್ನು ವಶಕ್ಕೆ ಪಡೆದು ನಿಷ್ಕ್ರಿಯಗೊಳಿಸಿದೆ ಎಂದು ಟಿವಿ9ಗೆ ಪೊಲೀಸ್ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಆರಂಭದಲ್ಲಿ‌ ಪಟಾಕಿ ತುಂಬಿದ ಪೊಟ್ಟಣ ಎಂದು ಭಾವಿಸಲಾಗಿತ್ತು. ಆದರೂ ಮುನ್ನೆಚ್ಚರಿಕೆಯಿಂದ ಕೆಂಪೇಗೌಡ ಕ್ರೀಡಾಂಗಣಕ್ಕೆ ರವಾನೆ‌. ಮರಳು ಚೀಲದಿಂದ ಸುತ್ತುವರಿದು ಮೈದಾನದಲ್ಲಿ‌ ಇರಿಸಲಾಗಿತ್ತು. ಬಳಿಕ‌ FSL ತಂಡದಿಂದ ಪರಿಶೀಲನೆ ನಡೆಸಿ ಸ್ಫೋಟಕವನ್ನ ನಿಷ್ಕ್ರಿಯಗೊಳಿಸಲಾಗಿದೆ.

Published On - 3:00 pm, Thu, 30 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?