AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಒಂದೇ ದಿನ ಜಾತ್ರೆ ಆಚರಿಸಲಾಗುತ್ತಿದೆ.

ಕೊರೊನಾ ಭೀತಿ: ಸುತ್ತೂರು ಜಾತ್ರೆ ಒಂದೇ ದಿನಕ್ಕೆ ಸೀಮಿತ
ಸುತ್ತೂರು ಜಾತ್ರೆ (ಫೈಲ್​ ಫೋಟೋ)
ರಾಜೇಶ್ ದುಗ್ಗುಮನೆ
|

Updated on:Dec 20, 2020 | 9:20 PM

Share

ನಂಜನಗೂಡು: ರಾಜ್ಯದ ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕೊರೊನಾ ಕಂಟಕ ಎದುರಾಗಿದೆ. 6 ದಿನ ನಡೆಯಬೇಕಿದ್ದ ಜಾತ್ರೆಯನ್ನು 1 ದಿನಕ್ಕೆ ಮೊಟಕು ಮಾಡಲು ಸುತ್ತೂರು ಶ್ರೀಗಳು ನಿರ್ಧರಿಸಿದ್ದಾರೆ.

ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಫೆ.8-13ವರೆಗೆ ನಡೆಯಬೇಕಿತ್ತು. ಈ ವೇಳೆ ರಥೋತ್ಸವ, ಲಕ್ಷ ದೀಪೋತ್ಸವ, ಅನ್ನದಾಸೋಹ ಸೇರಿ ನಾನಾ ಕಾರ್ಯಕ್ರಮಗಳು ನಡೆಯುತ್ತಿದ್ದವು.

ರಾಜ್ಯದ ನಾನಾ ಭಾಗಗಳಿಂದ ಜಾತ್ರೆಗೆ ಜನರು ಬರುತ್ತಿದ್ದರು. ಮುಖ್ಯಮಂತ್ರಿ, ಸಚಿವರು, ಕೇಂದ್ರದ ಮಂತ್ರಿಗಳು, ಶಾಸಕರು ಜಾತ್ರೆಯಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಜನರು ಸೇರುವುದು ಬೇಡ ಎನ್ನುವ ಕಾರಣಕ್ಕೆ ಈ ಬಾರಿ ಅತ್ಯಂತ ಸರಳವಾಗಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.

ಪ್ರತಿ ವರ್ಷ ತೇರು ಎಳೆಯುವ ಕಾರ್ಯಕ್ರಮಕ್ಕೆ ಜನಸ್ತೋಮವೇ ಸೇರುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಬ್ರೇಕ್​ ಹಾಕಲಾಗಿದೆ. ಈ ಮೂಲಕ ಕೊರೊನಾ ಹರಡದಂತೆ ತಡೆಯಲು ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತಿದೆ. ಈ ಬಾರಿ ಫೆಬ್ರವರಿ 10ರಂದು ಒಂದೇ ದಿನ ಜಾತ್ರಾ ಮಹೋತ್ಸವ ಜರುಗಲಿದೆ.

ನಂಜನಗೂಡು ಟಿಹೆಚ್​ಒ ಆತ್ಮಹತ್ಯೆ ಕೇಸ್: ಡಿಸಿ ಜತೆ ಟಿಹೆಚ್​ಒ ಮಾತಾಡಿದ್ದಾರೆನ್ನುವ ಆಡಿಯೋ ವೈರಲ್

Published On - 9:18 pm, Sun, 20 December 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​