AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ ನಿಧನ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮುಂಜಾನೆ ಮೈಸೂರಿನ JSS ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ ನಿಧನ
ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ
TV9 Web
| Edited By: ಆಯೇಷಾ ಬಾನು|

Updated on:Jun 14, 2021 | 9:58 AM

Share

ಮೈಸೂರು: ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ(90) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮುಂಜಾನೆ ಮೈಸೂರಿನ JSS ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

ಶಿವನಾಗಮ್ಮ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಶಿವನಾಗಮ್ಮ ನಿಧನಕ್ಕೆ ಸಿಎಂ ಬಿಎಸ್‌ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪೂರ್ವಾಶ್ರಮದ ಮಾತೃಶ್ರೀ ಶ್ರೀಮತಿ ಶಿವನಾಗಮ್ಮ ಅವರ ನಿಧನಕ್ಕೆ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸಂತಾಪ ಸೂಚಿಸಿದ ಎಸ್.ಟಿ.ಸೋಮಶೇಖರ್ ಸುತ್ತೂರು ಶ್ರೀಗಳ ಪೂರ್ವಶ್ರಮದ ಮಾತೃಶ್ರೀಯವರಾದ ಶ್ರೀಮತಿ ಶಿವನಾಗಮ್ಮನವರು ಲಿಂಗೈಕ್ಯರಾದದ್ದು ತುಂಬಾ ನೋವಿನ ಸಂಗತಿ. ಸುಮಾರು 90 ವರ್ಷಗಳು ಸಾರ್ಥಕವಾಗಿ ಬದುಕಿ ಬಾಳಿದವರು ಅವರು. ವಕೀಲರಾಗಿದ್ದ ದಿವಂಗತ ಎಸ್.ಎಂ. ಪ್ರಭುಸ್ವಾಮಿಯವರ ಶ್ರೀಮತಿಯಾಗಿ ತಮ್ಮ 6 ಜನ ಮಕ್ಕಳಿಗೆ ಬಾಲ್ಯದಲ್ಲಿ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರವನ್ನು ಕೊಟ್ಟು ಸಮಾಜಕ್ಕೆ ಆಸ್ತಿಯಾಗಿ ಬೆಳೆಸಿದರು. ಶ್ರೀಮತಿ ಶಿವನಾಗಮ್ಮ ಅವರ ಮಕ್ಕಳಾದ ಎಸ್.ಪಿ.ಶಶಿಕಲಾ ರವರು. ಸುತ್ತೂರು ಶ್ರೀಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ರವರು ಐ‌.ಎ.ಎಸ್.

ಅಧಿಕಾರಿಗಳಾದ ಷಡಕ್ಷರಸ್ವಾಮಿ ರವರು, ಜೆ.ಎಸ್.ಎಸ್. ಮಹಾವಿದ್ಯಾಪೀಠದ ಕಾರ್ಯದರ್ಶಿಗಳಾದ ಎಸ್.ಪಿ. ಮಂಜುನಾಥ್ ರವರು, ಪ್ರೊ. ಎಸ್.ಪಿ.ಉಮಾದೇವಿ ರವರು, ಹಾಗೂ ಉದಯ ಶಂಕರ್ ಅವರು ಸಮಾಜಕ್ಕೆ ಬಹುದೊಡ್ಡ ಆಸ್ತಿಯಾಗಿ ಎಲ್ಲರೂ ತಮ್ಮದೇ ಯಾದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಮಹಾತಾಯಿ ಶ್ರೀಮತಿ ಶಿವನಾಗಮ್ಮ ಅವರ ಲಿಂಗೈಕ್ಯದಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಎಸ್.ಟಿ.ಸೋಮಶೇಖರ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಪಾಸಿಟಿವಿಟಿ ರೇಟ್ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟಿದೆ?

Published On - 9:45 am, Mon, 14 June 21

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!