AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆ: ರಾಜ್ಯ ಬಿಜೆಪಿ ಯುವ ಮೋರ್ಚಾದಿಂದ ಇಂದು ವಾಕ​ಥಾನ್

ಸ್ವಾಮಿ ವಿವೇಕಾನಂದರ 157ನೇ ಜಯಂತಿ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ಯುವ ಮೋರ್ಚಾದಿಂದ ಇಂದು ವಾಕ್​ಥಾನ್‌ ಆಯೋಜಿಸಲಾಗಿದೆ. ಮೈಸೂರು, ವಿಜಯಪುರ, ಕೋಲಾರದಲ್ಲಿ ವಾಕ್​ಥಾನ್ ನಡೆಸಲಾಗುತ್ತಿದೆ.

ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆ: ರಾಜ್ಯ ಬಿಜೆಪಿ ಯುವ ಮೋರ್ಚಾದಿಂದ ಇಂದು ವಾಕ​ಥಾನ್
ರಾಜ್ಯದ ವಿವಿಧೆಡೆ ನಡೆಯಿತು ವಾಕ್​ಥಾನ್
TV9 Web
| Edited By: |

Updated on:Apr 06, 2022 | 10:55 PM

Share

ಬೆಂಗಳೂರು: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ಯುವ ಮೋರ್ಚಾದಿಂದ ಇಂದು ವಾಕ್​ಥಾನ್‌ ಆಯೋಜಿಸಲಾಗಿದೆ. ಮೈಸೂರು, ವಿಜಯಪುರ, ಕೋಲಾರದಲ್ಲಿ ವಾಕ್​ಥಾನ್ ನಡೆಸಲಾಗುತ್ತಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ, ನನ್ನ ದೇಶ-ನನ್ನ ಹೆಮ್ಮೆ ಮುಂತಾದ ಫಲಕಗಳನ್ನು ಹಿಡಿದು ಜನರು ವಾಕ್​ಥಾನ್​ನಲ್ಲಿ ಭಾಗಿಯಾಗಿದ್ದಾರೆ.

ರಾಮಕೃಷ್ಣ ಪರಮಹಂಸರ ಹಿಂಬಾಲಕರಾಗಿದ್ದ ಸ್ವಾಮಿ ವಿವೇಕಾನಂದರು 1863, ಜನವರಿ 12ರಂದು ಜನಿಸಿದರು. ಈ ಬಾರಿ ಅವರ 157ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಭಾರತದ ಯುವಸ್ಪೂರ್ತಿ ಎಂದೇ ಬಿಂಬಿತವಾಗಿರುವ ವಿವೇಕಾನಂದರ ಜನ್ಮದಿದ ಪ್ರಯುಕ್ತ, ಬಿಜೆಪಿ ಯುವಮೋರ್ಚಾ ವಾಕ​​ಥಾನ್ ಆಯೋಜಿಸಿದೆ.

ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಕಾಲ್ನಡಿಗೆ ಜಾಥಾ ನಡೆಸಲಾಗುತ್ತಿದೆ. ನಗರದ ಶಿವಾಜಿ ವೃತ್ತದಿಂದ ಶ್ರೀ ಸಿದ್ದೇಶ್ವರ ದೇವಸ್ಥಾನದವರೆಗೂ‌ ಸಾಗಿದ ಕಾಲ್ನಡಿಗೆ ಜಾಥಾದಲ್ಲಿ, ಬಿಜೆಪಿ‌ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ್ ಕೂಚಬಾಳ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಇತರರು ಭಾಗಿಯಾಗಿದ್ದಾರೆ.

ಸಂಸದ ಎಸ್. ಮುನಿಸ್ವಾಮಿಯವರಿಂದ ಚಾಲನೆ‌ ಕೋಲಾರದಲ್ಲೂ ವಿವೇಕಾನಂದರ ಜನ್ಮದಿನಾಚರಣೆ‌ ಹಿನ್ನಲೆಯಲ್ಲಿ ವಾಕ​ಥಾನ್ ಆಯೋಜಿಸಲಾಗಿದೆ. ವಾಕ್​ಥಾನ್, ನಗರದ‌ ಜೂನಿಯರ್ ಕಾಲೇಜು ಮೈದಾನದಿಂದ‌ ಆರಂಭವಾಗಿದೆ. ಸಂಸದ ಎಸ್. ಮುನಿಸ್ವಾಮಿ‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.  ವಾಕ್​ಥಾನ್ ನಗರದ ಪ್ರಮುಖ‌ ಬೀದಿಗಳಲ್ಲಿ‌ ಸಂಚಾರ ಮಾಡಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಡಾ. ವೇಣುಗೋಪಾಲ, ಕೆಯುಡಿಎ ಅಧ್ಯಕ್ಷ ಚಲಪತಿ ಮತ್ತಿತರರು ಭಾಗಿಯಾಗಿದ್ದಾರೆ.

ಬಾಲೆಯೊಬ್ಬಳು ವಿವೇಕಾನಂದರ ವೇಷದಲ್ಲಿ

ಮೈಸೂರಿನಲ್ಲಿ ವಾಕ​ಥಾನ್​ಗೆ ಚಾಲನೆ

ವಾಕ​ಥಾನ್​ನಲ್ಲಿ ಭಾಗವಹಿಸಿದ ಜನರು

ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ.. ‘ವಿವೇಕಾನಂದರು ತೋರಿದ ದಾರಿಯಲ್ಲಿ ನಾವೆಲ್ಲಾ ನಡೆಯುವಂತಾಗಲಿ’

Published On - 11:06 am, Sun, 10 January 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ