ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ: ಗ್ರಾಮಸ್ಥರಿಗೆ ಬೆದರಿ ಓಡಿದ ಸ್ವಯಂಘೋಷಿತ ಪವಾಡ ಪುರುಷ!

Edited By:

Updated on: Jan 19, 2026 | 1:06 PM

ಲಕ್ಕುಂಡಿಯ ಉತ್ಖನನ ಸ್ಥಳಕ್ಕೆ ಬಂದ ಸ್ವಾಮೀಜಿಯೊಬ್ಬರು ಹೈಡ್ರಾಮಾ ನಡೆಸಿದ್ದಾರೆ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಹೇಳಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು ಬೆನ್ನಟ್ಟಿ ಓಡಿಸಿದ್ದಾರೆ.

ಗದಗ, ಜನವರಿ 19: ಲಕ್ಕುಂಡಿಯಲ್ಲಿ ಇಂದು ನಾಲ್ಕನೇ ದಿನದ ಉತ್ಖನನ ನಡೆಯುತ್ತಿದ್ದು, ಗ್ರಾಮಕ್ಕೆ ಬಂದ ಸ್ವಾಮೀಜಿಯೊಬ್ಬರು ಫುಲ್​​ ಹೈಡ್ರಾಮಾ ನಡೆಸಿದ ಪ್ರಸಂಗ ನಡೆದಿದೆ. ತಾರಾಣಿಚೆನ್ನಮ್ಮ ವಂಶಸ್ಥ ಎಂದು ಪರಿಚಯಿಸಿಕೊಂಡಿರುವ ಎಸ್. ಸಿ. ಹಿರೇಮಠ ಹೆಸರಿನ ಸ್ವಾಮೀಜಿ, ತಾನೊಬ್ಬ ಪವಾಡ ಪುರುಷ. ತಾನು ನಿಂತ ಜಾಗದಲ್ಲಿ ಸಾವಿರ ಕೆಜಿ ಚಾಮುಂಡಿ‌ ಮೂರ್ತಿ ಇದೆ ಎಂದು ಕೈಯಲ್ಲಿ ಗಜಲಿಂಬೆ ಹಿಡಿದುಕೊಂಡು ಡ್ರಾಮಾ ಮಾಡಿದ್ದಾರೆ. ಆರಂಭದಲ್ಲಿ ಎಲ್ಲವನ್ನೂ ತೀವ್ರ ಕುತೂಹಲದಲ್ಲಿ ವೀಕ್ಷಿಸಿದ ಗ್ರಾಮಸ್ಥರು ಬಳಿಕ ಸ್ವಯಂಘೋಷಿತ ಪವಾಡ ಪುರುಷನನ್ನು ಬೆನ್ನಟ್ಟಿ ಓಡಿಸಿದ್ದಾರೆ. ಲಕ್ಕುಂಡಿ ಹಾಗೂ ಚಾಮುಂಡಿ ಇತಿಹಾಸಕ್ಕೂ ಸಂಬಂಧವಿಲ್ಲ. ನಮ್ಮೂರಿಗೆ ಬಂದು ಸುಳ್ಳು ಹೇಳ್ತಿಯಾ ಎಂದು ತರಾಟೆಗೆ ಪಡೆದಿದ್ದಾರೆ. ಜನರ ಆಕ್ರೋಶಕ್ಕೆ ಹೆದರಿದ ಸ್ವಾಮೀಜಿ ಹಿಂಗಾಲಿನಲ್ಲಿ ಓಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 19, 2026 01:05 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More