AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi Special Trains: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು

ಗೌರಿ ಗಣೇಶ ಅಥವಾ ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನೊಂದೇ ದಿನ ಬಾಕಿ ಇದೆ. ಆ ನಂತರ ಸಾಲು ಹಬ್ಬಗಳು ಬರಲಿವೆ. ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಪ್ರದೇಶಗಳಿಗೆ 22 ವಿಶೇಷ ರೈಲುಗಳನ್ನು ಘೋಷಿಸಿದೆ. ವಿವರ ಇಲ್ಲಿದೆ.

Ganesh Chaturthi Special Trains: ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು
ಹಬ್ಬಗಳ ಸೀಸನ್​ಗೆ ಬೆಂಗಳೂರಿನಿಂದ ವಿವಿಧೆಡೆಗೆ 22 ವಿಶೇಷ ರೈಲುಗಳು
ಗಣಪತಿ ಶರ್ಮಾ
|

Updated on:Sep 05, 2024 | 10:41 AM

Share

ಬೆಂಗಳೂರು, ಸೆಪ್ಟೆಂಬರ್ 5: ಗೌರಿ ಗಣೇಶ ಹಬ್ಬ, ದಸರಾ ಹಾಗೂ ದೀಪಾವಳಿ ಹಬ್ಬಗಳು ಮತ್ತು ಸಾಲು ರಜೆಗಳನ್ನು ಗಮನದಲ್ಲಿಟ್ಟುಕೊಂಡು ನೈಋತ್ಯ ರೈಲ್ವೆ ಕರ್ನಾಟಕದಾದ್ಯಂತ 22 ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ವಿಶೇಷ ರೈಲುಗಳ ವೇಳಾಪಟ್ಟಿ, ಪ್ರಯಾಣದ ಸಮಯ ಇತ್ಯಾದಿ ವಿವರಗಳನ್ನೂ ಹಂಚಿಕೊಂಡಿದೆ.

ಗಣೇಶ ಚತುರ್ಥಿ ವಿಶೇಷ ರೈಲುಗಳ ವಿವರ

ಸೆಪ್ಟೆಂಬರ್ 5 ರಿಂದ 7 ರವರೆಗೆ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ನಡೆಸಲಿದೆ. ಬೆಂಗಳೂರು ಕಲಬುರಗಿ ವಿಶೇಷ ರೈಲು ಎಸ್​ಎಂವಿಟಿ ಬೆಂಗಳೂರಿನಿಂದ ರಾತ್ರಿ 9:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿಗೆ ತಲುಪಲಿದೆ. ಅದೇ ರೀತಿ, ಸೆಪ್ಟೆಂಬರ್ 6 ರಿಂದ 8 ರವರೆಗೆ, ಕಲಬುರಗಿಯಿಂದ ಹಿಂತಿರುಗುವ ರೈಲು ಬೆಳಿಗ್ಗೆ 9:35 ಕ್ಕೆ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಎಸ್​ಎಂವಿಟಿ ಬೆಂಗಳೂರು ತಲುಪುತ್ತದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಪ್ರಯಾಣಿಕರ ವಿಶೇಷ ಗಮನಕ್ಕೆ; ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ ಎಂದು ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ದೀಪಾವಳಿ ವಿಶೇಷ ರೈಲುಗಳ ವಿವರ

ಅಕ್ಟೋಬರ್ 30 ಮತ್ತು ನವೆಂಬರ್ 2 ರಂದು ಮೈಸೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿವೆ. ವಿಜಯಪುರದಿಂದ ಮೈಸೂರಿಗೆ ಹಿಂದಿರುಗುವ ರೈಲು ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಸಂಚರಿಸಲಿದೆ. ಜತೆಗೆ, ಅಕ್ಟೋಬರ್ 30 ರಂದು ಯಶವಂತಪುರ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ನವೆಂಬರ್ 1, ಅಕ್ಟೋಬರ್ 31 ಮತ್ತು ನವೆಂಬರ್ 3 ರಂದು ಹಿಂದಿರುಗಲಿವೆ.

ದಸರಾ ವಿಶೇಷ ರೈಲುಗಳ ವಿವರ

ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ಮತ್ತು 12 ರಂದು ಎಸ್​ಎಂವಿಟಿ ಬೆಂಗಳೂರಿನಿಂದ ವಿಜಯಪುರಕ್ಕೆ ವಿಶೇಷ ರೈಲುಗಳು ಇರಲಿವೆ. ಅಕ್ಟೋಬರ್ 10 ಮತ್ತು 13 ರಂದು ರೈಲುಗಳು ಹಿಂತಿರುಗಲಿವೆ. ಅಕ್ಟೋಬರ್ 9 ಮತ್ತು 12 ರಂದು ಯಶವಂತಪುರ ಮತ್ತು ಬೆಳಗಾವಿ ನಡುವೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿದ್ದು, ಅಕ್ಟೋಬರ್ 10 ಮತ್ತು 13 ರಂದು ಹಿಂದಿರುಗಲಿವೆ. ಇದಲ್ಲದೆ, ಅಕ್ಟೋಬರ್ 9 ರಿಂದ 13 ರವರೆಗೆ ಮೈಸೂರು-ಕೆಎಸ್ಆರ್ ಬೆಂಗಳೂರು ಮಾರ್ಗದಲ್ಲಿ ಮತ್ತು ಅಕ್ಟೋಬರ್ 10 ರಿಂದ 14 ರವರೆಗೆ ಕೆಎಸ್ಆರ್ ಬೆಂಗಳೂರು-ಮೈಸೂರು ವಿಶೇಷ ರೈಲುಗಳು ಚಲಿಸಲಿವೆ.

ಇದನ್ನೂ ಓದಿ: ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಕಡ್ಡಾಯಗೊಳಿಸಲು ಮುಂದಾದ ಕರ್ನಾಟಕ ಸರ್ಕಾರ

ಇದೇ ಅವಧಿಯಲ್ಲಿ ಚಾಮರಾಜನಗರ ಮತ್ತು ಮೈಸೂರು ನಡುವೆ ಹೆಚ್ಚುವರಿ ಸೇವೆಗಳು ಲಭ್ಯವಿರುತ್ತವೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:07 am, Thu, 5 September 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್