AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ

Kalaburagi Bangalore Special Train: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸುವುದಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ವಿಶೇಷ ರೈಲು ಘೋಷಣೆ ಮಾಡಿದೆ. ರೈಲು ಹೊರಡುವ ಸಮಯ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ
ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆImage Credit source: SWR
ಗಣಪತಿ ಶರ್ಮಾ
|

Updated on: Oct 17, 2024 | 8:23 AM

Share

ಬೆಂಗಳೂರು, ಅಕ್ಟೋಬರ್ 17: ಈ ಹಿಂದೆ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಸೀಸನ್​​ನಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದ ನೈಋತ್ಯ ರೈಲ್ವೆ ಇದೀಗ ದೀಪಾವಳಿಗೂ ಪ್ರಯಾಣಿಕರ ನೆರವಿಗೆ ಧಾವಿಸಿದೆ. ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.

‘ಪ್ರಯಾಣಿಕರ ವಿಶೇಷ ಗಮನಕ್ಕೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ’ ಎಂದು ಎಕ್ಸ್​ ಖಾತೆಯಲ್ಲಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

ಬೆಂಗಳೂರು ಕಲಬುರಗಿ ವಿಶೇಷ ರೈಲು ವೇಳಾಪಟ್ಟಿ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್​ಎಂವಿಟಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​ಪ್ರೆಸ್ ರೈಲು ಒಟ್ಟು 12 ನಿಲುಗಡೆಗಳನ್ನು ಹೊಂದಿದೆ.

ಎಲ್ಲೆಲ್ಲಿ ನಿಲುಗಡೆ?

ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ

ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ವೀಪರ್ ಕ್ಲಾಸ್, 2 ಎಸಿ ಸಿ ತ್ರಿ ಟೈಯರ್, 1 ಲಗೇಜ್/ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು | ಎಸ್ಎಲ್‌ಆರ್‌ಡಿ ಸೇರಿ ಗಿಂತೆ 19 ಬೋಗಿಗಳನ್ನು ಒಳಗೊಂಡಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!