AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ

Kalaburagi Bangalore Special Train: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸುವುದಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ವಿಶೇಷ ರೈಲು ಘೋಷಣೆ ಮಾಡಿದೆ. ರೈಲು ಹೊರಡುವ ಸಮಯ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ
ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆImage Credit source: SWR
ಗಣಪತಿ ಶರ್ಮಾ
|

Updated on: Oct 17, 2024 | 8:23 AM

Share

ಬೆಂಗಳೂರು, ಅಕ್ಟೋಬರ್ 17: ಈ ಹಿಂದೆ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಸೀಸನ್​​ನಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದ ನೈಋತ್ಯ ರೈಲ್ವೆ ಇದೀಗ ದೀಪಾವಳಿಗೂ ಪ್ರಯಾಣಿಕರ ನೆರವಿಗೆ ಧಾವಿಸಿದೆ. ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.

‘ಪ್ರಯಾಣಿಕರ ವಿಶೇಷ ಗಮನಕ್ಕೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ’ ಎಂದು ಎಕ್ಸ್​ ಖಾತೆಯಲ್ಲಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

ಬೆಂಗಳೂರು ಕಲಬುರಗಿ ವಿಶೇಷ ರೈಲು ವೇಳಾಪಟ್ಟಿ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್​ಎಂವಿಟಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​ಪ್ರೆಸ್ ರೈಲು ಒಟ್ಟು 12 ನಿಲುಗಡೆಗಳನ್ನು ಹೊಂದಿದೆ.

ಎಲ್ಲೆಲ್ಲಿ ನಿಲುಗಡೆ?

ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ

ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ವೀಪರ್ ಕ್ಲಾಸ್, 2 ಎಸಿ ಸಿ ತ್ರಿ ಟೈಯರ್, 1 ಲಗೇಜ್/ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು | ಎಸ್ಎಲ್‌ಆರ್‌ಡಿ ಸೇರಿ ಗಿಂತೆ 19 ಬೋಗಿಗಳನ್ನು ಒಳಗೊಂಡಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್