Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ

Kalaburagi Bangalore Special Train: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸುವುದಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ವಿಶೇಷ ರೈಲು ಘೋಷಣೆ ಮಾಡಿದೆ. ರೈಲು ಹೊರಡುವ ಸಮಯ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ
ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆImage Credit source: SWR
Follow us
Ganapathi Sharma
|

Updated on: Oct 17, 2024 | 8:23 AM

ಬೆಂಗಳೂರು, ಅಕ್ಟೋಬರ್ 17: ಈ ಹಿಂದೆ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಸೀಸನ್​​ನಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದ ನೈಋತ್ಯ ರೈಲ್ವೆ ಇದೀಗ ದೀಪಾವಳಿಗೂ ಪ್ರಯಾಣಿಕರ ನೆರವಿಗೆ ಧಾವಿಸಿದೆ. ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.

‘ಪ್ರಯಾಣಿಕರ ವಿಶೇಷ ಗಮನಕ್ಕೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ’ ಎಂದು ಎಕ್ಸ್​ ಖಾತೆಯಲ್ಲಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

ಬೆಂಗಳೂರು ಕಲಬುರಗಿ ವಿಶೇಷ ರೈಲು ವೇಳಾಪಟ್ಟಿ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್​ಎಂವಿಟಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​ಪ್ರೆಸ್ ರೈಲು ಒಟ್ಟು 12 ನಿಲುಗಡೆಗಳನ್ನು ಹೊಂದಿದೆ.

ಎಲ್ಲೆಲ್ಲಿ ನಿಲುಗಡೆ?

ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ

ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ವೀಪರ್ ಕ್ಲಾಸ್, 2 ಎಸಿ ಸಿ ತ್ರಿ ಟೈಯರ್, 1 ಲಗೇಜ್/ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು | ಎಸ್ಎಲ್‌ಆರ್‌ಡಿ ಸೇರಿ ಗಿಂತೆ 19 ಬೋಗಿಗಳನ್ನು ಒಳಗೊಂಡಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್