AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ

Kalaburagi Bangalore Special Train: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸುವುದಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ವಿಶೇಷ ರೈಲು ಘೋಷಣೆ ಮಾಡಿದೆ. ರೈಲು ಹೊರಡುವ ಸಮಯ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ
ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆImage Credit source: SWR
Ganapathi Sharma
|

Updated on: Oct 17, 2024 | 8:23 AM

Share

ಬೆಂಗಳೂರು, ಅಕ್ಟೋಬರ್ 17: ಈ ಹಿಂದೆ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಸೀಸನ್​​ನಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದ ನೈಋತ್ಯ ರೈಲ್ವೆ ಇದೀಗ ದೀಪಾವಳಿಗೂ ಪ್ರಯಾಣಿಕರ ನೆರವಿಗೆ ಧಾವಿಸಿದೆ. ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.

‘ಪ್ರಯಾಣಿಕರ ವಿಶೇಷ ಗಮನಕ್ಕೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ’ ಎಂದು ಎಕ್ಸ್​ ಖಾತೆಯಲ್ಲಿ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

ಬೆಂಗಳೂರು ಕಲಬುರಗಿ ವಿಶೇಷ ರೈಲು ವೇಳಾಪಟ್ಟಿ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್​ಎಂವಿಟಿ ವಿಶೇಷ ಎಕ್ಸ್​​ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್​ಪ್ರೆಸ್ ರೈಲು ಒಟ್ಟು 12 ನಿಲುಗಡೆಗಳನ್ನು ಹೊಂದಿದೆ.

ಎಲ್ಲೆಲ್ಲಿ ನಿಲುಗಡೆ?

ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ

ಈ ರೈಲು 12 ಜನರಲ್ ಸೆಕೆಂಡ್ ಕ್ಲಾಸ್, 3 ಸ್ವೀಪರ್ ಕ್ಲಾಸ್, 2 ಎಸಿ ಸಿ ತ್ರಿ ಟೈಯರ್, 1 ಲಗೇಜ್/ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರ್ ಮತ್ತು | ಎಸ್ಎಲ್‌ಆರ್‌ಡಿ ಸೇರಿ ಗಿಂತೆ 19 ಬೋಗಿಗಳನ್ನು ಒಳಗೊಂಡಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ