ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಂಧ್ರದಿಂದ ತೆರಳುತ್ತಿದ್ದ ಈ ರೈಲು ಇನ್ನು ಬೆಂಗಳೂರಿಗೂ ಬರಲಿದೆ!

Sathya Sai Prashanthi Nilayam-Howrah Superfast Express: ಪಶ್ಚಿಮ ಬಂಗಾಳದ ಹೌರಾ ಮತ್ತು ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮಧ್ಯ ಸಂಚರಿಸುವ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಯಶವಂತಪುರದವರೆಗೆ ವಿಸ್ತರಣೆಯಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ರೈಲಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಇತರೆ ಮಾಹಿತಿ ಇಲ್ಲಿದೆ.

ಪ್ರಯಾಣಿಕರಿಗೆ ಗುಡ್ ನ್ಯೂಸ್: ಆಂಧ್ರದಿಂದ ತೆರಳುತ್ತಿದ್ದ ಈ ರೈಲು ಇನ್ನು ಬೆಂಗಳೂರಿಗೂ ಬರಲಿದೆ!
ಸಾಂದರ್ಭಿಕ ಚಿತ್ರ
Follow us
|

Updated on: Sep 10, 2024 | 7:32 AM

ಬೆಂಗಳೂರು, ಸೆಪ್ಟೆಂಬರ್ 10: ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣ ಮತ್ತು ಪಶ್ಚಿಮ ಬಂಗಾಳದ ಹೌರಾ ಮಧ್ಯೆ ಸಂಚರಿಸುತ್ತಿದ್ದ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ವರೆಗೆ ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ ಅಧಿಕೃತ ಖಾತೆಯ ಮೂಲಕ ನೈಋತ್ಯ ರೈಲ್ವೆಯು ಪ್ರಯಾಣಿಕರಿಗೆ ಮಾಹಿತಿ ನೀಡಿದೆ.

ಪ್ರಯಾಣಿಕರ ವಿಶೇಷ ಗಮನಕ್ಕೆ, ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 22831/22832) ಸೇವೆ ಯಶವಂತಪುರದವರೆಗೆ ವಿಸ್ತರಣೆ ಮಾಡಲಾಗಿದೆ. ನಾಗಸಮುದ್ರಂ ನಿಲ್ದಾಣದಲ್ಲಿ ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ಯಾವಾಗಿನಿಂದ ಜಾರಿ?

ಹೌರಾ-ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ರೈಲು ಸಂಖ್ಯೆ 22831, ಈಗ ಹೌರಾ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 25 ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಹಿಸಲಿದೆ. ಈ ರೈಲು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (ಎಸ್‌ಎಸ್ ಪಿಎನ್) ನಲ್ಲಿ ಕೊನೆಗೊಳ್ಳುವ ಬದಲು ಯಶವಂತಪುರದವರೆಗೆ ತನ್ನ ಪ್ರಯಾಣವನ್ನು ವಿಸ್ತರಿಸುತ್ತದೆ.

ಈ ಹಿಂದೆ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ಯಾಣದಿಂದ ಹೌರಾಗೆ ಚಲಿಸುತ್ತಿದ್ದ ರೈಲು ಸಂಖ್ಯೆ 22832, ಈಗ ಯಶವಂತಪುರದಿಂದ ಹೌರಾಕ್ಕೆ ಸೆಪ್ಟೆಂಬರ್ 27 ರಿಂದ ಸಂಚರಿಸಲಿದೆ.

ಇದನ್ನೂ ಓದಿ: ಬೆಂಗಳೂರು: ಎಸ್​ಎಂವಿಟಿ ರೈಲು ನಿಲ್ದಾಣದಲ್ಲಿ ಹೊಸ ನಿಯಮ ಜಾರಿ, ಪ್ರಯಾಣಿಕರಿಗೆ ಸಂಕಷ್ಟ

ಅಗತ್ಯ ಮೂಲಸೌಕರ್ಯ ಕಾಮಗಾರಿಯ ಸಲುವಾಗಿ ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ಸಂಖ್ಯೆ 07693/07694 ಗುಂತಕಲ್-ಹಿಂದೂಪುರ-ಗುಂತಕಲ್ ಡೆಮು ವಿಶೇಷ ರೈಲುಗಳ ನಿಲುಗಡೆಯನ್ನು ನವೆಂಬರ್ 5 ರವರೆಗೆ ರದ್ದುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ