AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಆರ್‌ಬಿ ಪರೀಕ್ಷೆಗೆ ಹಾಜರಾಗುವವರಿಗೆ ಗುಡ್ ನ್ಯೂಸ್: ಈ ಮಾರ್ಗಗಳಲ್ಲಿ 4 ಟ್ರಿಪ್ ವಿಶೇಷ ರೈಲು

ಆರ್‌ಆರ್‌ಬಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಕರ್ನಾಟಕದ ಒಂದು ಮಾರ್ಗದಲ್ಲಿ ನಾಲ್ಕು ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆ ಘೋಷಿಸಿದೆ. ನವೆಂಬರ್ 24 ರಿಂದ 28 ರವರೆಗೆ ಈ ರೈಲುಗಳು ಸಂಚರಿಸಲಿವೆ. ರೈಲುಗಳು ಸಂಚರಿಸುವ ಮಾರ್ಗ, ವೇಳಾಪಟ್ಟಿ ಮತ್ತು ನಿಲುಗಡೆಗಳ ಮಾಹಿತಿ ಇಲ್ಲಿದೆ.

ಆರ್‌ಆರ್‌ಬಿ ಪರೀಕ್ಷೆಗೆ ಹಾಜರಾಗುವವರಿಗೆ ಗುಡ್ ನ್ಯೂಸ್: ಈ ಮಾರ್ಗಗಳಲ್ಲಿ 4 ಟ್ರಿಪ್ ವಿಶೇಷ ರೈಲು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 22, 2024 | 9:05 AM

Share

ಬೆಂಗಳೂರು, ನವೆಂಬರ್ 22: ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ 4 ಟ್ರಿಪ್ ವಿಶೇಷ ರೈಲುಗಳ ಘೋಷಣೆ ಮಾಡಿದೆ. ಹುಬ್ಬಳ್ಳಿ-ಕರ್ನೂಲ್ ಸಿಟಿ ನಡುವೆ ಈ ರೈಲುಗಳು ಸಂಚರಿಸಲಿವೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ರೈಲುಗಳ ವೇಳಾಪಟ್ಟಿಯನ್ನೂ ಪ್ರಕಟಿಸಿದೆ.

ಆರ್‌ಆರ್‌ಬಿ (ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ ರೈಲು ಓಡಿಸಲು ರೈಲ್ವೆ ಮಂಡಳಿಯು ಸೂಚಿಸಿದೆ ಎಂದು ಎಕ್ಸ್​ ಸಂದೇಶದಲ್ಲಿ ನೈಋತ್ಯ ರೈಲ್ವೆ ತಿಳಿಸಿದೆ.

ಹುಬ್ಬಳ್ಳಿ-ಕರ್ನೂಲ್ ಸಿಟಿ ವಿಶೇಷ ರೈಲುಗಳ ವಿವರ

ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳಿ-ಕರ್ನೂಲ್ ಸಿಟಿ ಕಾಯ್ದಿರಿಸದ ವಿಶೇಷ ಎಕ್ಸ್​​ಪ್ರೆಸ್ ರೈಲು ನವೆಂಬರ್ 24, 25. 26 ಮತ್ತು 27 ರಂದು ರಾತ್ರಿ 8:15 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಗ್ಗೆ 6 ಗಂಟೆಗೆ ಸಿಟಿ ಕರ್ನೂಲ್ ಸಿಟಿ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 07316 ಕರ್ನೂಲ್ ಸಿಟಿ-ಎಸ್‌ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ಎಕ್ಸ್​​ಪ್ರೆಸ್ ರೈಲು ನವೆಂಬರ್ 25, 26, 27 ಮತ್ತು 28 ರಂದು ಬೆಳಿಗ್ಗೆ 07:30 ಗಂಟೆಗೆ ಕರ್ನೂಲ್ ಸಿಟಿ ನಿಲ್ದಾಣದಿಂದ ಹೊರಟು, ಅದೇ ದಿನ ಸಂಜೆ 4:15 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಗದಗ, ಕೊಪ್ಪಳ, ಹೊಸಪೇಟೆ, ತೋರಣಗಲ್ಲು, ಬಳ್ಳಾರಿ, ಗುಂತಕಲ್ ಮತ್ತು ಡೋನ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಈ ರೈಲು ಸಾಮಾನ ದಿತೀಯ ದರ್ಜೆ (8) ಮತ್ತು ಅಂಗವಿಕಲರಿಗೆ ಮೀಸಲಾದ ಬೋಗಿಗಳೊಂದಿಗೆ ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ (2) ಸೇರಿದಂತೆ 10 ಬೋಗಿಗಳನ್ನು ಹೊಂದಿರುತ್ತದೆ.

ಪ್ರಯಾಣಕರು ಭಾರತೀಯ ರೈಲ್ವೆ ಅಧಿಕೃತ ವೆಬ್​ಸೈಟ್ (www.enquiry.indianrail.gov.in) ಗೆ ಭೇಟಿ ನೀಡುವ ಮೂಲಕ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ಪರಿಶೀಲಿಸಬಹುದು ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!