AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರ ಗಲಭೆ ಸಂಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ: ವಿಸ್ಟ್ರಾನ್​ ಸ್ಪಷ್ಟನೆ

ಕಾರ್ಮಿಕರ ಗಲಾಟೆಗೆ ಸಂಬಂಧಿಸಿದಂತೆ ಸರ್ಕಾರದ ತನಿಖೆಯೊಂದಿಗೆ ಆಂತರಿಕ ತನಿಖೆಯೂ ನಡೆಯುತ್ತಿದೆ. ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸುತ್ತೇವೆ. ತೈವಾನ್​ ಕಚೇರಿಗೆ ಇಲ್ಲಿಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ.

ಕಾರ್ಮಿಕರ ಗಲಭೆ ಸಂಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ: ವಿಸ್ಟ್ರಾನ್​ ಸ್ಪಷ್ಟನೆ
ವಿಸ್ಟ್ರಾನ್​
Skanda
| Edited By: |

Updated on:Dec 21, 2020 | 1:59 PM

Share

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಫೋನ್​ ತಯಾರಿಕ ಘಟಕದಲ್ಲಿ ನಡೆದ ಕಾರ್ಮಿಕರ ಗಲಾಟೆ ಸಂಸ್ಥೆಯ ಕಾರ್ಯನಿರ್ವಹಣೆಯ ಮೇಲೆ ಯಾವುದೇ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ತೈವಾನ್​ ಮೂಲದ ವಿಸ್ಟ್ರಾನ್​ ಕಂಪೆನಿ ತಿಳಿಸಿದೆ.

ಕಾರ್ಮಿಕರ ಗಲಾಟೆಗೆ ಸಂಬಂಧಿಸಿದಂತೆ ಸರ್ಕಾರದ ತನಿಖೆಯೊಂದಿಗೆ ಆಂತರಿಕ ತನಿಖೆಯೂ ನಡೆಯುತ್ತಿದೆ. ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸುತ್ತೇವೆ. ತೈವಾನ್​ ಕಚೇರಿಗೆ ಇಲ್ಲಿಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಲಾಗುತ್ತಿದ್ದು, ಶೀಘ್ರದಲ್ಲೇ ಎಲ್ಲವೂ ಸರಿಹೋಗಲಿದೆ. ನರಸಾಪುರದ ಘಟಕ ಸಣ್ಣಮಟ್ಟದಲ್ಲಿರುವ ಕಾರಣ ಹೆಚ್ಚಿನ ತೊಂದರೆಗಳೇನೂ ಸಂಭವಿಸುವುದಿಲ್ಲ. ಗ್ರಾಹಕರ ಸಮಸ್ಯೆ ಪರಿಹರಿಸಲು ಯಾವುದೇ ಅಡೆತಡೆಗಳಾಗುವುದಿಲ್ಲ ಎಂದು ವಿಸ್ಟ್ರಾನ್​ ಭರವಸೆ ವ್ಯಕ್ತಪಡಿಸಿದೆ.

ಕಾರ್ಮಿಕರ ಆರೋಪದ ಕುರಿತು ನಿನ್ನೆ ಸ್ಪಷ್ಟನೆ ನೀಡಿದ್ದ ವಿಸ್ಟ್ರಾನ್​, ಕೆಲ ಕಾರ್ಮಿಕರಿಗೆ ಸಂಬಳ ನೀಡುವಲ್ಲಿ ವ್ಯತ್ಯಯ ಆಗಿರುವುದು ನಿಜ, ಅದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ತಿಳಿಸಿತ್ತು. ಸಂಸ್ಥೆಯ ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ತಯಾರಿಕಾ ಉತ್ಪನ್ನಗಳಿಗೆ ದೊಡ್ಡಮಟ್ಟದ ಹಾನಿಯೇನೂ ಆಗಿಲ್ಲ. ಒಟ್ಟಾರೆ ₹ 52 ಕೋಟಿ ನಷ್ಟವಾಗಿರಬಹುದು ಎಂದು ತಿಳಿಸಿದೆ.

ಆದರೆ, ಆರಂಭದಲ್ಲಿ ಈ ಕುರಿತು ವಿಸ್ಟ್ರಾನ್, ಕಾರ್ಮಿಕರ ದಾಳಿಯಿಂದ ಸುಮಾರು ಹಾನಿಯಾಗಿದೆ. ಅಂದಾಜು ₹ 437 ಕೋಟಿ ನಷ್ಟವಾಗಿದೆ ಎಂದು ಹೇಳಿತ್ತು. ವಿಸ್ಟ್ರಾನ್​ ಗಲಾಟೆಯ ಕುರಿತು ನಿನ್ನೆ ಹೇಳಿಕೆ ನೀಡಿದ್ದ ಆ್ಯಪಲ್​ ಸಂಸ್ಥೆ ವಿಸ್ಟ್ರಾನ್​ ಆಂತರಿಕ ಕಲಹಗಳು ಪರಿಹಾರವಾಗುವ ತನಕ ಯಾವುದೇ ಹೊಸಾ ಯೋಜನೆ ಮಂಜೂರು ಮಾಡುವುದಿಲ್ಲ ಮತ್ತು ಈಗಾಗಲೇ ನೀಡಿರುವ ಕೆಲಸಗಳನ್ನೂ ತಡೆ ಹಿಡಿಯುತ್ತೇವೆ ಎಂದು ತಿಳಿಸಿತ್ತು.

ವಿಸ್ಟ್ರಾನ್​ ಕಂಪನಿಗೆ ಕೊಡಲ್ಲ ಹೊಸ ಉತ್ಪಾದನಾ ಗುತ್ತಿಗೆಗಳು: ಆ್ಯಪಲ್ ಕಟು ನುಡಿ

Published On - 1:59 pm, Mon, 21 December 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ