ಪ್ರಮಾಣ ವಚನ ಸ್ವೀಕರಿಸಿದ 17 ಪರಿಷತ್​ ಸದಸ್ಯರು, ಮೊದಲ ಬಾರಿಗೆ ಪರಿಷತ್​ ಪ್ರವೇಶಿಸಿದ ಯತೀಂದ್ರ ​

| Updated By: ವಿವೇಕ ಬಿರಾದಾರ

Updated on: Jun 24, 2024 | 12:56 PM

ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ 17 ಪರಿಷತ್​ ಸದಸ್ಯರು, ಮೊದಲ ಬಾರಿಗೆ ಪರಿಷತ್​ ಪ್ರವೇಶಿಸಿದ ಯತೀಂದ್ರ ​
ನೂತನ ಪರಿಷತ್​ ಸದಸ್ಯರ ಪ್ರಮಾಣ ವಚನ ಸ್ವೀಕಾರ
Follow us on

ಬೆಂಗಳೂರು, ಜೂನ್​ 24: ವಿಧಾನ ಪರಿಷತ್​ಗೆ (Vidhan Parishat) ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ (Basvaraj Horatti) ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಕಾನೂನು ಹಾಗೂ ಸಂಸದೀಯ ಸಚಿವ ಹೆಚ್​ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಒಟ್ಟು 17 ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್​ಗೆ 11 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ 6 ಮಂದಿ ಆಯ್ಕೆಯಾಗಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್​​ಗೆ ಆಯ್ಕೆಯಾದವರು

ಕಾಂಗ್ರೆಸ್​ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್, ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್​ನಿಂದ ಜವರಾಯಿಗೌಡ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿನಂದಿಸಿದ ಸದನ

ಶಿಕ್ಷಕ ಹಾಗೂ ಪಧವಿದರ ಕ್ಷೇತ್ರದಿಂದ ಆಯ್ಕೆಯಾದವರು

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗೆದ್ದ ಚಂದ್ರಶೇಖರ್ ಬಸವರಾಜ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ರಾಮೋಜಿಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​ನಿಂದ ಡಿ ಟಿ ಶ್ರೀನಿವಾಸ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದ ಡಾ. ಧನಂಜಯ ಸರ್ಜಿ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಎಸ್​ಎಲ್ ಭೋಜೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್​ಂದ ಕೆ ವಿವೇಕಾನಂದ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಇವರು ವರುಣಾ ಕ್ಷೇತ್ರದ ಶಾಸಕರಾಗಿ ವಿಧಾನಸಭೆಯನ್ನು ಪ್ರವೇಶಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ