ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ

ಈ ಸರ್ವೇ ಪ್ರಕ್ರಿಯೆ ಮುಂದಿನ 6 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ ಇದರ ವರದಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಸಲ್ಲಿಕೆ ಆಗಲಿದೆ.

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ
ಸಾಂದರ್ಭಿಕ ಚಿತ್ರ

Updated on: Jan 29, 2021 | 9:39 PM

ಬೆಂಗಳೂರು: ತಾಳಗುಪ್ಪಾ-ಸಿದ್ದಾಪುರ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಯ ಸರ್ವೇ ಕಾರ್ಯದ ಟೆಂಡರ್ ಪ್ರಕ್ರಿಯೆ ಇಂದು ಪೂರ್ಣಗೊಂಡಿದೆ ಎಂದು ವಿಧಾನಸಭೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಯೋಜನೆಯ ಸರ್ವೇ ಕಾರ್ಯದ ಟೆಂಡರ್ ಒಮೇಗಾ ಅನಾಲೆಟಿಕ್ಸ್ ಪ್ರೈವೇಟ್ ಲಿಮಿಟೆಡ್​ ಪಡೆದುಕೊಂಡಿದೆ. ಈ ಸರ್ವೆ ಪ್ರಕ್ರಿಯೆಯಲ್ಲಿ ಯೋಜನೆಯ ವೆಚ್ಚ, ಯೋಜನೆಗೆ ಬೇಕಾಗುವ ಭೂಮಿಯ ಅವಶ್ಯಕತೆ, ಅವಶ್ಯವಿರುವ ರೈಲ್ವೇ ನಿಲ್ದಾಣ​ಗಳ ಸಂಖ್ಯೆ, ರೈಲ್ವೇ ಮಾರ್ಗ ಜೋಡಣೆ ಹಾಗೂ ಇನ್ನಿತರ ಅಂಶವು ಒಳಗೊಂಡಿರುತ್ತದೆ‌ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಸರ್ವೇ ಪ್ರಕ್ರಿಯೆ ಮುಂದಿನ 6 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ ಇದರ ವರದಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಸಲ್ಲಿಕೆ ಆಗಲಿದೆ. ಈ ಯೋಜನೆ ಜಾರಿಗೆ ಬಂದರೆ, ತಾಳಗುಪ್ಪಾದಿಂದ ಹುಬ್ಬಳ್ಳಿಗೆ ರೈಲು ಸಂಪರ್ಕ ಬೆಸೆಯಲಿದೆ.

Budget 2021 | ಅಪೂರ್ಣ ರೈಲ್ವೆ ಯೋಜನೆಗಳು ಹಲವು, ಇನ್ನೆಷ್ಟು ವರ್ಷ ಕಾಯಬೇಕು ಸ್ವಾಮಿ?

 

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us