AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಬಿಜೆಪಿ- ಜೆಡಿಎಸ್ ಶಾಸಕರ ಜಟಾಪಟಿ; ಹಾಸನದಲ್ಲಿ ಸಚಿವರ ಮುಂದೆ ಮಾತಿನ ಚಕಮಕಿ

ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿಜೆಪಿ ಶಾಸಕ ಪ್ರೀತಂಗೌಡ ನಡುವೆ ಟಾಕ್ ಫೈಟ್ ನಡೆದಿದೆ. ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು.

ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಬಿಜೆಪಿ- ಜೆಡಿಎಸ್ ಶಾಸಕರ ಜಟಾಪಟಿ; ಹಾಸನದಲ್ಲಿ ಸಚಿವರ ಮುಂದೆ ಮಾತಿನ ಚಕಮಕಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 30, 2021 | 4:36 PM

Share

ಹಾಸನ: ವೇದಿಕೆ ಮೇಲೆ ಕೂರುವ ವಿಚಾರಕ್ಕೆ ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶಾಸಕರ ಮಾತಿನ ಚಕಮಕಿ ಏರ್ಪಟ್ಟ ಘಟನೆ ನಡೆದಿದೆ. ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿಜೆಪಿ ಶಾಸಕ ಪ್ರೀತಂಗೌಡ ನಡುವೆ ಟಾಕ್ ಫೈಟ್ ನಡೆದಿದೆ. ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕೊವಿಡ್ ನಿರ್ವಹಣೆ ಸಂಬಂಧ ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯುತ್ತಿತ್ತು.

ಸಭೆಯಲ್ಲಿ ವೇದಿಕೆ ಮೇಲೆ ಸಚಿವರಾದ ಆರ್. ಅಶೋಕ್ ಕೂಡ ಇದ್ದರು. ಗೋಪಾಲಯ್ಯ, ಡಿಸಿ, ಎಸ್‌ಪಿ, ಜಿಲ್ಲಾ ಪಂಚಾಯಿತಿ ಸಿಇಒ ಕೂಡ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಶಾಸಕರು ವೇದಿಕೆ ಮೇಲೆ ಕುಳಿತುಕೊಳ್ಳಬೇಕು. ಮುಂದಿನ ಸಭೆಯಿಂದ ಕುಳಿತುಕೊಳ್ಳಬೇಕು ಎಂದು ಆರ್. ಅಶೋಕ್ ಸೂಚಿಸಿದ್ದಾರೆ. ಇದಕ್ಕೆ ವ್ಯವಸ್ಥೆ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಅಸಮಾಧಾನ ಹೊರಹಾಕಿದ ಶಿವಲಿಂಗೇಗೌಡ, ಎಲ್ಲ ಜಿಲ್ಲೆಯಲ್ಲೂ ಶಾಸಕರು ವೇದಿಕೆ ಮೇಲೆ ಇರುತ್ತಾರೆ. ಆದ್ರೆ ಹಾಸನ ಜಿಲ್ಲೆಯಲ್ಲಿ ಮಾತ್ರ ಈ ರೀತಿ ಮಾಡುತ್ತಾರೆ. ನಮ್ಮನ್ನು ಕೆಳಗೆ ಕೂರಿಸಲು ಹೇಳಿದ್ದು ಪ್ರೀತಂಗೌಡ ಎಂದು ಹೇಳಿದ್ದಾರೆ. ಶಿವಲಿಂಗೇಗೌಡ ಹೇಳಿಕೆಗೆ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರೇವಣ್ಣ ಸಚಿವರಾಗಿದ್ದಾಗ ಹೇಗೆ ನಡೆದಿತ್ತೋ ಹಾಗೆಯೇ ಈಗಲೂ ಇದೆ. ಈಗಲೂ ಅದನ್ನೇ ಮುಂದುವರಿಸಿದ್ದೇವೆ ಎಂದು ಪ್ರೀತಂಗೌಡ ಹೇಳಿದ್ದಾರೆ.

ಸಿಎಂ ಬಂದಾಗ ರೇವಣ್ಣ ಪಕ್ಕದಲ್ಲಿಯೇ ಕುಳಿತುಕೊಂಡಿದ್ದರು. ಆಗ ಏಕೆ ಸುಮ್ಮನಿದ್ರಿ ಎಂದು ಶಿವಲಿಂಗೇಗೌಡ ಮರುಪ್ರಶ್ನೆ ಹಾಕಿದ್ದಾರೆ. ಮುಂದೆ ಈ ರೀತಿ ಆಗುವುದು ಬೇಡ ರೇವಣ್ಣರನ್ನು ಕರೆಯಿರಿ. ವೇದಿಕೆಯ ಮೇಲೆ ಹೆಚ್.ಡಿ.ರೇವಣ್ಣರನ್ನು ಕರೆಯಿರಿ ಎಂದು ಶಿವಲಿಂಗೇಗೌಡ ಹೇಳಿದ್ದಾರೆ. ಶಿವಲಿಂಗೇಗೌಡ ಹೇಳಿದಂತೆ ರೇವಣ್ಣರನ್ನ ಆರ್. ಅಶೋಕ್ ವೇದಿಕೆ ಮೇಲೆ ಕರೆದಿದ್ದಾರೆ.

ಆದರೆ ವೇದಿಕೆ ಮೇಲೆ ಹೋಗಲು ರೇವಣ್ಣ ನಿರಾಕರಿಸಿದ್ದಾರೆ. ಈ ವೇಳೆ ಮತ್ತೆ ಬಿಜೆಪಿ ಶಾಸಕ ಪ್ರೀತಂಗೌಡ ತಿರುಗೇಟು ನೀಡಿದ್ದಾರೆ. ನೀವು ವಿರೋಧಪಕ್ಷದಲ್ಲಿ ಕುಳಿತಾಗ ನಿಯಮ‌ ಹೇಳಬೇಡಿ. ಈಗ ನಾವು ಹೇಳೋದನ್ನ ಮಾಡಿ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸಾವಿನಲ್ಲೂ ಒಂದಾದ ಹಾಸನ ದಂಪತಿ; ಪತ್ನಿ ಮೃತಪಟ್ಟು 15 ನಿಮಿಷದಲ್ಲಿ ಪತಿಗೆ ಹೃದಯಾಘಾತ

MRPL: ಎಂಆರ್​ಪಿಎಲ್​ನಲ್ಲಿ ಕನ್ನಡಿಗರಿಗಿಲ್ಲ ಕೆಲಸ: ಮಂಗಳೂರಿನಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಭಟಿಸಿ ಎಚ್ಚರಿಕೆ

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ