AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್​ ಕಲಾಪದಲ್ಲಿ ‘ನಿತ್ಯ ಸುಮಂಗಲಿ’ ಪದ ಗದ್ದಲ, ಸಿಟಿ ರವಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಸದಸ್ಯರು

ಇಂದಿನಿಂದ ಮುಂಗಾರು ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ವಿಧಾನಸಭೆ ಹಾಗೂ ವಿಧಾನಪರಿಷತ್​​ನಲ್ಲಿ ವಿರೋಧ ಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಮುಗಿಬಿದ್ದಿದೆ. ಅದರಲ್ಲೂ ಪ್ರಮುಖವಾಗಿ ವಾಲ್ಮೀಕಿ ನಿಗಮ ಹಗರಣದ ಅಸಲಿ ಯುದ್ಧ ಇಂದಿನಿಂದ ಶುರುವಾಗಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡಾ ತಿರುಗುಬಾಣ ಬಿಟ್ಟಿದೆ. ಇದರ ಮಧ್ಯ ವಿಧಾನಪರಿಷತ್​ನಲ್ಲಿ 'ನಿತ್ಯ ಸುಮಂಗಲಿ' ಪದ ಗದ್ದಲಕ್ಕೆ ಕಾರಣವಾಗಿದೆ.

ಪರಿಷತ್​ ಕಲಾಪದಲ್ಲಿ 'ನಿತ್ಯ ಸುಮಂಗಲಿ' ಪದ ಗದ್ದಲ, ಸಿಟಿ ರವಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಸದಸ್ಯರು
ವಿಧಾನಪರಿಷತ್ ಕಲಾಪ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 15, 2024 | 10:47 PM

Share

ಬೆಂಗಳೂರು, (ಜುಲೈ 15): ವಿಧಾನ ಮಂಡಲ ಮುಂಗಾರು ಅಧಿವೇಶನ (Karnataka Assembly Session) ಇಂದಿನಿಂದ ಶುರುವಾಗಿದೆ. ನಿರೀಕ್ಷೆಯಂತೆ ವಾಲ್ಮೀಕಿ ನಿಗಮದ ಹಗರಣ (Valmiki Scam) ಪ್ರತಿಧ್ವನಿಸಿದೆ. ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಬಳಿಕ ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಸರ್ಕಾರದ ವಿರುದ್ಧ ಹಗರಣ ಬಗ್ಗೆ ಧ್ವನಿ ಎತ್ತಿದರೆ, ಇತ್ತ ವಿಧಾನಪರಿಷತ್​ ಕಲಾಪದಲ್ಲಿ ಸಿಟಿ ರವಿ, ಹಗರಣ ಬಗ್ಗೆ ಅಬ್ಬರಿಸಿದರು. ಸರ್ಕಾರದ ವಿರುದ್ಧ ಅಬ್ಬರಿಸುವ ಮಧ್ಯ ಸಿಟಿ ರವಿ ಅವರು ನಿತ್ಯ ಸುಮಂಗಲಿ ಪದ ಬಳಕೆ ಮಾಡಿದರು. ಈ ಬಗ್ಗೆ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿ ಶುರುವಾಗುತ್ತಿದ್ದಂತೆಯೇ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಉಮಾಶ್ರೀ ಮಧ್ಯ ಪ್ರವೇಶಿಸಿ, ಸುಮಂಗಲಿ ಪದ ಬಳಕೆ ಮಾಡಿದ ಸಿಟಿ ರವಿ ವಿರುದ್ಧ ಆಕ್ರೋಶ ಹೊರಹಾಕಿದರು.

ನಿನ್ನೆ(ಜುಲೈ 14) ವಕ್ಫ್ ಬೋರ್ಡ್ ನಲ್ಲಿ ಅಕ್ರಮದ ಆರೋಪ ಬಂದಿದೆ. ದಲಿತರ ಹಣ ಅಕ್ರಮವಾಗಿದೆ‌. ಹಿಂದುಳಿದ ವರ್ಗದ ಹಣಕೂಡಾ ಲೂಟಿ ಆಗಿದೆ. ಆಡು ಮುಟ್ಟದ ಸೊಪ್ಪಿಲ್ಲ ರೂಪದಲ್ಲಿ ಎಲ್ಲದ್ರಲ್ಲೂ ಲೂಟಿ ಹೊಡೆದಿದ್ದಾರೆ. ಸತ್ಯ ಮರೆಮಾಚಲು ಕಾಂಗ್ರೆಸ್ ಅವರು ಅಡ್ಡಿಪಡಿಸುತ್ತಿದ್ದಾರೆ ಎಂದು ಸಿಟಿ ರವಿ ಗುಡುಗಿದರು. ಸಿಟಿ ರವಿ ಮಾತಿಗೆ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅಡ್ಡಿಪಡಿಸಿ, ಬಿಜೆಪಿ ಸರ್ಕಾರ ಹೇಗೆ ಬಂತು ಹೇಳಿ ನೋಡೋಣ ಎಂದು ವಿಶ್ವನಾಥ್​ ಕಾಲೆಳೆದರು.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್: ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ ಸಿಎಂ

ಇದರಿಂದ ಮತ್ತಷ್ಟು ಆಕ್ರೋಶಗೊಂಡ ಸಿಟಿ ರವಿ, ಕೆಲವರು ನಿತ್ಯ ಸುಮಂಗಲಿಯರು ಇರುತ್ತಾರೆ. ದೀರ್ಘ ಸುಮಂಗಲಿಯರು ಇರುತ್ತಾರೆ‌. ಅವರು ಅಧಿಕಾರ ಇರೋ ಕಡೆ ನಿತ್ಯ ಸುಮಂಗಲಿಯರು ಹೋಗುತ್ತಾರೆ ಎಂದು ಪುಟ್ಟಣ್ಣಗೆ ಟಾಂಗ್ ಕೊಟ್ಟರು. ಪುಟ್ಟಣ ಅವರು ಮೊದಲು ಜೆಡಿಎಸ್​ನಲ್ಲಿದ್ದರು. ಬಳಿಕ ಅವರು ಬಿಜೆಪಿ ಸೇರಿದ್ದು, ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷಾಂತರ ಮಾಡಿದ್ದರಿಂದ ಅಧಿಕಾರ ಇರೋ ಕಡೆ ನಿತ್ಯ ಸುಮಂಗಲಿಯರು ಹೋಗುತ್ತಾರೆ ಎಂದು ಸಿಟಿ ರವಿ ಕಾಲೆಳೆದರು.

ಹೀಗೆ ನಿತ್ಯ ಸುಮಂಗಲಿಯರು, ದೀರ್ಘ ಸುಮಂಗಲಿಯರು ಎನ್ನುವ ಪದ ಬಗ್ಗೆ ಮಾತಿನ ಚರ್ಚೆ ತಾರಕಕ್ಕೇರಿದ್ದೆ ತಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಉಮಾಶ್ರೀ ಮಧ್ಯ ಪ್ರವೇಶಿಸಿದ್ದು, ಮೊದಲು ನಿತ್ಯ ಸುಮಂಗಲಿ ಪದ ಬಳಕೆ ಮಾಡಿದ್ದ ಸಿಟಿ ರವಿ ವಿರುದ್ಧ ಕಿಡಿಕಾರಿದರು. ನಿತ್ಯ ಸುಮಂಗಲಿ ಎನ್ನುವುದು ಸರಿಯಲ್ಲ. ಇದು ಸಿಟಿ ರವಿ ಅವರ ಮನಸ್ಥಿತಿ ಎಂದು ಮಾತಿನಲ್ಲೇ ತಿವಿದರು.

ಇನ್ನು ಸಿಟಿ ರವಿ ಅವರ ನಿತ್ಯ ಸುಮಂಗಲಿ ಪದ ಬಳಕೆಗೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಂತೆಯೇ ಕೆಲ ಕಾಲ ವಾದ-ಪ್ರತಿವಾದದ ಗಲಾಟೆ ಆಯ್ತು. ಬಳಿಕ ಮಧ್ಯ ಪ್ರವೇಶಿಸಿದ ಉಪ ಸಭಾಪತಿ, ನಿತ್ಯ ಸುಮಂಗಲಿ ಪದ ಬಳಕೆಯನ್ನು ಕಡತದಿಂದ ತೆಗೆದು ಹಾಕಿದರು.

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ