AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್

ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಹಳಷ್ಟು ವಿಳಂಬವಾಗಿದ್ದು, ಇಂದು ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಮಹತ್ವದ ವಿಚಾರಣೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Mar 02, 2023 | 6:51 AM

Share

ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ (taluk and zilla panchayat election) ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಸಲ್ಲಿಸಿದ ಪಿಐಎಲ್ ವಿಚಾರಣೆಯನ್ನು ಇಂದು(ಮಾರ್ಚ್ 02) ಕರ್ನಾಟಕ ಹೈಕೋರ್ಟ್ (karnataka high court) ನಡೆಸಲಿದೆ. ನಿನ್ನೆ(ಮಾ.1) ಹೈಕೋರ್ಟ್‌ಗೆ ಸರ್ಕಾರದಿಂದ ಅಧಿಸೂಚನೆಯ ಪ್ರತಿ ಸಲ್ಲಿಕೆಯಾಗಿದೆ. ಇಂದು ಚುನಾವಣಾ ಆಯೋಗದ ಪ್ರತಿಕ್ರಿಯೆ ಕುರಿತು ಕೋರ್ಟ್ ವಿಚಾರಣೆ ಮಾಡಲಿದೆ. ಇದರಿಂದ ಏನು ಆದೇಶ ನೀಡಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದ್ದು, ಸ್ಥಳೀಯರ ನಾಯಕರ ಚಿತ್ತ ಇದೀಗ ಕೋರ್ಟ್​ನತ್ತ ನೆಟ್ಟಿದೆ.

ಸೀಮಾ ನಿರ್ಣಯ ಆಯೋಗದ ವರದಿ ಸಿಎಂ ಅಂಗೀಕರಿಸಿದ್ದಾರೆ ಎಂದು ನಿನ್ನೆ ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆ ಹೊರಡಿಸಿರುವ ಬಗ್ಗೆ ಹೈಕೋರ್ಟ್‌ಗೆ ರಾಜ್ಯಸರ್ಕಾರದಿಂದ ಅಧಿಸೂಚನೆಯ ಪ್ರತಿ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗದ ಪ್ರತಿಕ್ರಿಯೆ ಕುರಿತು ಕೋರ್ಟ್ ವಿಚಾರಣೆ ನಡೆಸಲಿದೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿತ್ತು. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿತ್ತು.

ಕಳೆದ ವರ್ಷ ಮೇ ತಿಂಗಳಲ್ಲಿ ನಿಗದಿಯಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಲಿಲ್ಲ. ಅರ್ಜಿಯು ಹೈಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವಾಗ ಮದ್ಯಪ್ರವೇಶಿಸುವುದಿಲ್ಲ ಎಂದು ಕಾರಣ ನೀಡಿತ್ತು.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?