AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water Dispute: ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ; ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು

Tamil Nadu Moves Supreme Court Against Karnataka; ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು.

Cauvery Water Dispute: ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ; ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 14, 2023 | 8:34 PM

Share

ನವದೆಹಲಿ, ಆಗಸ್ಟ್ 14: ಕಾವೇರಿ ನೀರಿಗಾಗಿ (Cauvery Water) ತಮಿಳುನಾಡು (Tamil Nadu) ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್(Supreme Court) ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು. ಅದಕ್ಕೂ ಮುನ್ನ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ಸಭೆಯಿಂದ ಹೊರನಡೆದ ಘಟನೆಯೂ ನಡೆದಿತ್ತು.

ಕಾವೇರಿ ನೀರು ಬಿಡುಗಡೆ; ಕರ್ನಾಟಕದ ವಾದವೇನು?

ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ 15,000 ಕ್ಯೂಸೆಕ್ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಇದಕ್ಕೆ ಕಳೆದ ಶುಕ್ರವಾರ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಅಸಮ್ಮತಿ ಸೂಚಿಸಿದ್ದರು. ಆಗಸ್ಟ್ 22 ರವರೆಗೆ ತಮಿಳುನಾಡಿಗೆ ಕೇವಲ 8,000 ಕ್ಯೂಸೆಕ್‌ಗಳನ್ನು ಮಾತ್ರ ಬಿಡುಗಡೆ ಮಾಡಬಹುದಷ್ಟೇ ಎಂದು ಕರ್ನಾಟಕದ ಅಧಿಕಾರಿಗಳು ತಿಳಿಸಿದ್ದರು. ಇದಕ್ಕೆ ಸಂಬಂಧಿಸಿದ ಕಾರಣವನ್ನು ಮನವರಿಕೆ ಮಾಡಿಕೊಟ್ಟಿದ್ದರು. ಆದರೆ, ಇದು ತಮಿಳುನಾಡಿನ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ಹೆಚ್ಚು ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ; ಒಂದು ಹನಿಯೂ ಹೆಚ್ಚು ಬಿಡಲ್ಲವೆಂದ ಕರ್ನಾಟಕ

ಆದರೆ, ಈ ವಿಚಾರದಲ್ಲಿ ತಮಿಳುನಾಡಿನ ಅಧಿಕಾರಿಗಳು ಹೇಳುತ್ತಿರುವುದೇ ಬೇರೆ. ಕರ್ನಾಟಕದ ಜಲಾಶಯಗಳಲ್ಲಿ ಸಾಕಷ್ಟು ನೀರಿದೆ. ಆದರೆ ತಮಿಳುನಾಡಿಗೆ ಬಿಡುಗಡೆ ಮಾಡಲು ಅವರು ಮನಸು ಮಾಡುತ್ತಿಲ್ಲ ಎಂದು ತಮಿಳುನಾಡಿನ ಅಧಿಕಾರಿಗಳು ದೂರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Mon, 14 August 23

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು