ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ […]

ಇರಿತಕ್ಕೊಳಗಾಗಿದ್ದ ಶಾಸಕ ತನ್ವೀರ್ ಸೇಠ್ ಈಗ ಹೇಗಿದ್ದಾರೆ?
ಸಾಧು ಶ್ರೀನಾಥ್​

Updated on: Nov 19, 2019 | 4:51 PM

ಮೈಸೂರು: ಯುವನೊಬ್ಬನಿಂದ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಇರಿತಕ್ಕೊಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಸದ್ಯಕ್ಕೆ ಔಟ್ ಆಫ್ ಡೇಂಜರ್. ಇಂದು ಹಾಸಿಗೆಯಿಂದ ಎದ್ದು, ಕುರ್ಚಿಯಲ್ಲಿ ಕೂತಿದ್ದಾರೆ. ವೆಂಟಿಲೇಟರ್ ಇಲ್ಲದೆ ಉಸಿರಾಡುತ್ತಿದ್ದಾರೆ‌ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯಕ್ಕೆ ಇನ್ಯಾವುದೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ. ಮುಂದೆ ಅವರು ಹೇಗೆ ಸ್ಪಂದಿಸುತ್ತಾರೆ ಅಂತಾ ನೋಡಿಕೊಂಡು ಒಂದೆರಡು ದಿನದಲ್ಲಿ ಐಸಿಯುನಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ. ಇಂದಿನ‌ ಸ್ಥಿತಿಯಲ್ಲಿ ಇನ್ನು ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಇರುತ್ತಾರೆ. ಸದ್ಯ ಅವರಿಗೆ ನಾರ್ಮಲ್ ಫುಡ್ ಕೊಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಮುಖ್ಯಸ್ಥ ಉಪೇಂದ್ರ ಶೆಣೈ ಹೇಳಿದ್ದಾರೆ.

ಯುವಕ ಬೀಸಿದ ಮಚ್ಚು ಸೇಠ್ ಅವ್ರ ಕುತ್ತಿಗೆಯಲ್ಲಿ ಬಹು ಆಳದ ವರೆಗೂ ಹೋಗಿದೆ. ಅದನ್ನು ನೋಡಿಯೆ ನಮಗೆ ಆತಂಕ ಹೆಚ್ಚಾಗಿತ್ತು. ಈಗ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಅವರ ಕಿವಿಯ ಕೆಳಭಾಗವು ತುಂಡಾಗಿತ್ತು. ಅದಕ್ಕೆ ಹೊಲಿಗೆ ಹಾಕಿ ಜೋಡಿಸಿದ್ದೇವೆ ಎಂದು ವೈದ್ಯರು ವಿವರಿಸಿದ್ದಾರೆ.

Published On - 4:50 pm, Tue, 19 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us