AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೌಕ್ತೆ ಚಂಡಮಾರುತ: ಮಗುಚಿದ ದೋಣಿಯಲ್ಲಿದ್ದ ಏಳು ಮಂದಿ ನಾಪತ್ತೆ; ನಾಳೆ ಬೆಳಗ್ಗೆವರೆಗೂ ಉಡುಪಿಯಲ್ಲಿ ರೆಡ್​ ಅಲರ್ಟ್​

Cyclone Tauktae In Karnataka: ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು.

ತೌಕ್ತೆ ಚಂಡಮಾರುತ: ಮಗುಚಿದ ದೋಣಿಯಲ್ಲಿದ್ದ ಏಳು ಮಂದಿ ನಾಪತ್ತೆ; ನಾಳೆ ಬೆಳಗ್ಗೆವರೆಗೂ ಉಡುಪಿಯಲ್ಲಿ ರೆಡ್​ ಅಲರ್ಟ್​
ಉಡುಪಿಯಲ್ಲಿ ಅತಿಯಾದ ಗಾಳಿ-ಮಳೆ
Lakshmi Hegde
|

Updated on:May 15, 2021 | 8:12 PM

Share

ಉಡುಪಿ: ಈ ವರ್ಷದ ಮೊದಲ ಚಂಡಮಾರುತ ತೌಕ್ತೆಯ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಮೋಡಕವಿವ ವಾತಾವರಣ ಇದ್ದು, ಮಧ್ಯಾಹ್ನದಿಂದಲೇ ಮಳೆ ಶುರುವಾಗಿದೆ.

ಉಡುಪಿಯಲ್ಲಿ ನಾಳೆ ಬೆಳಗ್ಗೆವರೆಗೆ ರೆಡ್​ ಅಲರ್ಟ್​ ಇದ್ದು, ಮುಂದಿನ ಎರಡು ದಿನಗಳು ಅಂದರೆ ಮೇ 17ರವರೆಗೆ ಆರೆಂಜ್​ ಅಲರ್ಟ್ ಜಾರಿಯಲ್ಲಿರಲಿದೆ. ಇನ್ನೆರಡು ದಿನವೂ 65-115 ಮಿಮೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಉಡುಪಿ ಜಿಲ್ಲಾಡಳಿತ ಖಡಕ್​ ಸೂಚನೆ ನೀಡಿದೆ. ಸಮುದ್ರ, ನದಿ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಗುಚಿದ ದೋಣಿ.. ಚಂಡಮಾರುತದ ಎಚ್ಚರಿಕೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಸಮುದ್ರಕ್ಕೆ ಇಳಿದ ದೋಣಿ ಮುಳುಗಡೆಯಾಗಿದೆ. ಈ ಅಲಾಯನ್ಸ್ ಎಂಬ ಹೆಸರಿನ ವಿಗ್ಗ್ ಬೋಟ್​​​ ಎಂಆರ್​ಪಿಎಲ್​ ಕಚ್ಚಾತೈಲ ಹಡಗಿನ ಪೈಪ್​ಲೈನ್​ ನಿರ್ವಹಣೆ ಮಾಡುತ್ತಿದ್ದ ದೋಣಿಯಾಗಿತ್ತು. ಒಟ್ಟು 9 ಜನರು ಸಮುದ್ರಕ್ಕೆ ಇಳಿದಿದ್ದರು. ಇದೀಗ 7ಮಂದಿ ನಾಪತ್ತೆಯಾಗಿದ್ದಾರೆ. ಅವರಲ್ಲಿ ಇಬ್ಬರು ಮೊಮಿರುಲ್ ಮುಲ್ಲಾ( 34), ಕರೀಮುಲ್ಲಾ ಶೇಕ್ (24) ಎಂಬುವರು ಟ್ಯೂಬ್​ನಲ್ಲಿ ಈಜಿಕೊಂಡು ಬಂದು ಜೀವ ಉಳಿಸಿಕೊಂಡಿದ್ದಾರೆ. ಇಬ್ಬರೂ ಉಡುಪಿಯ ಮಟ್ಟುಕೊಪ್ಲ ಎಂಬಲ್ಲಿ ದಡ ಸೇರಿದ್ದಾರೆ. ಇನ್ನುಳಿದ ಏಳು ಮಂದಿಗಾಗಿ ಸಮುದ್ರದಲ್ಲಿ ಕೋಸ್ಟಲ್​ ಗಾರ್ಡ್​ ಹುಡುಕಾಟ ನಡೆಸಿದೆ.

ಇಂದು ಮೊದಲ ಬಲಿ ಹಾಗೇ ಚಂಡಮಾರುತ ತಂದ ಮಳೆಯ ಅಬ್ಬರದ ಮಧ್ಯೆ ರೈತನೊಬ್ಬ ಇಂದು ಮೃತಪಟ್ಟಿದ್ದಾನೆ. ವಿದ್ಯುತ್​ ತಂತಿ ಸ್ಪರ್ಶಿಸಿದ ಕಾಪು ತಾಲೂಕಿನ ರೈತ ರಮೇಶ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ತೌಕ್ತೆ ಚಂಡಮಾರುತದ ಪ್ರಭಾವ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೂ ವ್ಯಾಪಿಸುವ ಸಾಧ್ಯತೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

Cyclone Tauktae: ತೌಕ್ತೆ ಚಂಡಮಾರುತ ಪರಿಣಾಮ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ

Tauktae cyclone Effect Red alert in Udupi till Tomorrow Morning

Published On - 8:06 pm, Sat, 15 May 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ