AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 20ರ ವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ; ಬೆಳಗಾವಿಯಲ್ಲಿ ವಿಮಾನ ಹಾರಾಟ ರದ್ದು

ಚಂಡಮಾರುತ ಪ್ರಭಾವದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಮೇ 20ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮೇ 20ರ ವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ; ಬೆಳಗಾವಿಯಲ್ಲಿ ವಿಮಾನ ಹಾರಾಟ ರದ್ದು
ಹವಾಮಾನ ವರದಿ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Aug 23, 2021 | 12:27 PM

Share

ಬೆಂಗಳೂರು: ಇಂದಿನಿಂದ ಮೇ 20ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿಕೆ ನೀಡಿದ್ದಾರೆ. ತೌಕ್ತೆ ಚಂಡಮಾರುತ ಪೂರ್ವ ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ಇದೆ. ತೌಕ್ತೆ ಮೇ 18ರಂದು ಗುಜರಾತ್​ನ ಮಹುವಾ ಹಾಗೂ ಪೋರಬಂದರ್ ತಲುಪುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚಂಡಮಾರುತ ಪ್ರಭಾವದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಮೇ 20ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ 3 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ ಎಂದು ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ತೌಕ್ತೆ ಸೈಕ್ಲೋನ್ ಪರಿಣಾಮ ಹಿನ್ನೆಲೆ ವಿಮಾನ ಹಾರಾಟ ರದ್ದು ಪ್ರತಿಕೂಲ ಹವಾಮಾನ ಹಿನ್ನೆಲೆ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಬೆಳಗಾವಿಯಲ್ಲಿ ಬೆಳಗ್ಗೆಯಿಂದ ವಿಮಾನಗಳ ಹಾರಾಟ ರದ್ದಾಗಿದೆ. ಪರಿಸ್ಥಿತಿ ಅವಲೋಕಿಸಿ ವಿಮಾನಗಳ ಹಾರಾಟ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಲಂಗರು ಕಳಚಿ ದಿಕ್ಕಾಪಾಲಾಗಿ ಹೋಗಿದ್ದ ಟಗ್ ಮತ್ತೆ ಪತ್ತೆ ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಟಗ್ ಮುಲ್ಕಿ ಬಳಿಯಲ್ಲಿ ಪತ್ತೆಯಾಗಿದೆ. ಕೋರಮಂಡಲ್ ಹೆಸರಿನ ಟಗ್ ಪತ್ತೆಯಾಗಿದೆ. ಕಲ್ಲು ಬಂಡೆಗೆ ಸಿಕ್ಕಿಹಾಕಿಕೊಂಡಿರುವ ಕೋರಮಂಡಲ್ ಟಗ್, ಮುಲ್ಕಿ ರಾಕ್ಸ್​​ನಿಂದ 4 ನಾಟಿಕಲ್ ಮೈಲಿನಲ್ಲಿ ಪತ್ತೆಯಾಗಿದೆ. ಕೋಸ್ಟ್​ಗಾರ್ಡ್ ನೌಕರರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಟಗ್, ನಿನ್ನೆ ಇದ್ದ ಸ್ಥಳದಿಂದ ಸಾಕಷ್ಟು ದೂರ ಹೋಗಿದೆ. ಎಮ್ಆರ್​ಪಿಎಲ್​ನ 9 ಮಂದಿ ಕಾರ್ಮಿಕರು ಟಗ್​ನಲ್ಲೇ ಸುರಕ್ಷಿತವಾಗಿದ್ದಾರೆ.

ಇದನ್ನೂ ಓದಿ: Cyclone Tauktae Effect: ಚಿಕ್ಕಮಗಳೂರಿನಲ್ಲಿ ಭಾರಿ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ

Cyclone Tauktae: ತೌಕ್ತೆ ಚಂಡಮಾರುತ ಪರಿಣಾಮ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ

Published On - 5:49 pm, Sun, 16 May 21

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ