AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ತಾರತಮ್ಯ: ಕೇಂದ್ರದ ನಡೆ ಖಂಡಿಸಿ 8 ರಾಜ್ಯಗಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ 8 ರಾಜ್ಯಗಳ ಸಿಎಂಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಟ್ವೀಟ್​ ಮಾಡಿರುವ ಅವರು, ಕರ್ನಾಟಕದಂತಹ ರಾಜ್ಯಗಳಿಗೆ ಕಡಿಮೆ ತೆರಿಗೆ ಹಂಚಿಕೆ ಈ ಅನ್ಯಾಯದ ನಡೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತೆ ಎಂದು ಹೇಳಿದ್ದಾರೆ.

ತೆರಿಗೆ ತಾರತಮ್ಯ: ಕೇಂದ್ರದ ನಡೆ ಖಂಡಿಸಿ 8 ರಾಜ್ಯಗಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
ತೆರಿಗೆ ತಾರತಮ್ಯ: ಕೇಂದ್ರದ ನಡೆ ಖಂಡಿಸಿ 8 ರಾಜ್ಯಗಳ ಸಿಎಂಗೆ ಪತ್ರಬರೆದ ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on:Sep 11, 2024 | 10:36 PM

Share

ಬೆಂಗಳೂರು, ಸೆಪ್ಟೆಂಬರ್​ 11: ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ಖಂಡಿಸಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಪತ್ರ ಬರೆದಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಕರ್ನಾಟಕ ಮತ್ತು ಇತರೆ ತಲಾವಾರು ಜಿಎಸ್​​ಡಿಪಿ ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ, ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ. ಈ ಅನ್ಯಾಯದ ನಡೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತೆ. ಪ್ರಗತಿಪರ ರಾಜ್ಯಗಳಿಗೆ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ

ಹಣಕಾಸು ಆಯೋಗವು ಬದಲಾವಣೆಯನ್ನು ಮಾಡುವ ಹಾಗೂ ಬೆಳವಣಿಗೆ ಮತ್ತು ಉತ್ತಮ ತೆರಿಗೆ ಕ್ರೋಢೀಕರಣಕ್ಕಾಗಿ ಉತ್ತೇಜಕಗಳನ್ನು ರಚಿಸುವ ಅಗತ್ಯವಿರುವಾಗ ಹಣಕಾಸಿನ ಒಕ್ಕೂಟದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ನಾನು ಅವರನ್ನು ಆಹ್ವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:35 pm, Wed, 11 September 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್