Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ ನಂತರ ಎಚ್ಚೆತ್ತ ರಾಜ್ಯ ಸರ್ಕಾರ; ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಪರಿಷ್ಕರಿತ ದರದ ಪ್ರಕಾರ 20 ನಿಮಿಷಗಳವರೆಗೆ ಕಾಯುವಿಕೆ ದರಗಳನ್ನು ಟ್ಯಾಕ್ಸಿ ಚಾಲಕರು ಪಡೆಯುವಂತಿಲ್ಲ. ನಂತರದ ಪ್ರತಿ 15 ನಿಮಿಷಗಳಿಗೆ ₹ 10 ನಿಗದಿ ಮಾಡಲಾಗಿದೆ.

ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ ನಂತರ ಎಚ್ಚೆತ್ತ ರಾಜ್ಯ ಸರ್ಕಾರ; ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ
ಏರ್ಪೋರ್ಟ್ ಟ್ಯಾಕ್ಸಿ
Follow us
guruganesh bhat
|

Updated on:Apr 01, 2021 | 7:13 PM

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆಯ ನಂತರ ಎಚ್ಚೆತ್ತಿರುವ ರಾಜ್ಯ ಸರ್ಕಾರ ಟ್ಯಾಕ್ಸಿ ಪ್ರಯಾಣ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ದಿನದಿಂದ ದಿನಕ್ಕೆ ಇಂಧನ ಬೆಲೆ ಹೆಚ್ಚಳ‌ವಾಗುತ್ತಿರುವ ಕಾರಣ ಟ್ಯಾಕ್ಸಿ ಪ್ರಯಾಣ ದರವನ್ನು ಹೆಚ್ಚಳಗೊಳಿಸಲು ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಪ್ರಯಾಣ ದರ‌ ಏರಿಕೆ ಮಾಡುವಂತೆ ಟ್ಯಾಕ್ಸಿ ಮಾಲೀಕರ ಬೇಡಿಕೆ ಸಲ್ಲಿಸಿದ್ದು, ವಿವಿಧ ಸ್ವರೂಪದ ಟ್ಯಾಕ್ಸಿಗಳ ಪ್ರಯಾಣ ದರ‌ದಲ್ಲಿ ಟ್ಯಾಕ್ಸಿ ಮೌಲ್ಯಗಳ ಆಧಾರದ ಮೇಲೆ ದರ ಪರಿಷ್ಕರಣೆ ಮಾಡಲಾಗಿದೆ.

ಪರಿಷ್ಕರಣೆಯ ನಂತರದ ದರವೆಷ್ಟು? ಟ್ಯಾಕ್ಸಿಗಳನ್ನು ಎ, ಬಿ, ಸಿ, ಮತ್ತು ಡಿಗಳೆಂದು ವರ್ಗೀಕರಣ ಮಾಡಿ ದರ ಹೆಚ್ಚಳ ಮಾಡಲಾಗಿದೆ. ಎ ವರ್ಗದ ₹ 15 ಲಕ್ಷ ಮೇಲ್ಪಟ್ಟ ವಾಹನಗಳಿಗೆ ಕನಿಷ್ಠ 4 ಕಿಮೀವರೆಗೆ ₹ 150 ನಿಗದಿಪಡಿಸಲಾಗಿದೆ.  ಹೆಚ್ಚುವರಿ ಪ್ರತಿ ಕಿಮೀಗೆ  ಕನಿಷ್ಠ ₹ 27 ಗರಿಷ್ಟ ₹ 54 ದರ ನಿಗದಿ ಮಾಡಲಾಗಿದೆ. ಬಿ ವರ್ಗದಲ್ಲಿ ₹ 10 ಲಕ್ಷದಿಂದ ₹  16 ಲಕ್ಷದವರೆಗಿನ ಟ್ಯಾಕ್ಸಿಗಳಿಗೆ ಕನಿಷ್ಠ 4 ಕಿಮೀವರೆಗೆ ₹ 120 ದರ ನಿಗದಿ ಮಾಡಲಾಗಿದೆ. ನಂತರದ ಪ್ರತಿ ಕಿಮೀಗೆ ಕನಿಷ್ಠ ₹ 24,  ಗರಿಷ್ಠ ₹48 ದರ ನಿಗಡಿಪಡಿಸಲಾಗಿದೆ. ಸಿ ವರ್ಗದ 5 ಲಕ್ಷದಿಂದ 10 ಲಕ್ಷದ ವಾಹನಗಳಿಗೆ ಕನಿಷ್ಠ 4 ಕಿಮೀಗೆ  ₹100 ನಿಗದಿ ಮಾಡಲಾಗಿದ್ದು, ನಂತರ ಪ್ರತಿ ಕಿಮೀಗೆ ಕನಿಷ್ಠ ₹21 ಮತ್ತು ಗರಿಷ್ಠ₹ 42 ನಿಗದಿಪಡಿಸಲಾಗಿದೆ. ಡಿ ವರ್ಗದ ವಾಹನಗಳಿಗೆ 5 ಲಕ್ಷದವರಿಗಿನ ವಾಹನಗಳಿಗೆ ಕನಿಷ್ಠ ದರ ₹75 ಆಗಿದ್ದರೆ, ಮುಂದಿನ ಹೆಚ್ಚುವರಿ ಪ್ರತಿ ಕಿಲೋಮೀಟರಿಗೆ  ಕನಿಷ್ಠ₹ 18, ಗರಿಷ್ಠ ₹ 36 ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

NEW TAXI FARE

ಪರಿಷ್ಕೃತ ಟ್ಯಾಕ್ಸಿ ದರ

ಜಿಎಸ್​ಟಿ ಹಾಗೂ ಟೋಲ್ ಶುಲ್ಕ ಪ್ರಯಾಣಿಕನಿಂದ ಸಮಯದ ಆಧಾರದಲ್ಲಿ ದರ ವಸೂಲಿಗೆ ತಡೆ ನೀಡಲಾಗಿದೆ. ಕಿಲೋಮೀಟರ್ ಆಧಾರದಲ್ಲಿ ಅಧಿಸೂಚನೆಯ ದರ ಮಾತ್ರ ಪ್ರಯಾಣಿಕರಿಂದ ಪಡೆಯಬಹುದು ಎಂದು ಪರಿಷ್ಕರಿಸಿ ಆದೇಶ ನೀಡಲಾಗಿದೆ.  ಪರಿಷ್ಕರಿತ ದರದ ಪ್ರಕಾರ  20 ನಿಮಿಷಗಳವರೆಗೆ ಕಾಯುವಿಕೆ ದರಗಳನ್ನು ಟ್ಯಾಕ್ಸಿ ಚಾಲಕರು ಪಡೆಯುವಂತಿಲ್ಲ. ನಂತರದ ಪ್ರತಿ 15 ನಿಮಿಷಗಳಿಗೆ ₹ 10 ನಿಗದಿ ಮಾಡಲಾಗಿದೆ.

ಟ್ಯಾಕ್ಸಿ ದರ ಹೆಚ್ಚಳಕ್ಕೆ ಕಾರಣವಾಯಿತೇ ಚಾಲಕ ಪ್ರತಾಪ್ ಆತ್ಮಹತ್ಯೆ?

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನದ ದ್ವಾರದ ಮುಂಭಾಗ ಮಾರ್ಚ್ 30ರಂದು ರಾಮನಗರ ಮೂಲದ ಪ್ರತಾಪ್ ಏರ್​ಪೋರ್ಟ್ ಟರ್ಮಿನಲ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕ್ಯಾಬ್‌ನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು. ಆಗ ಭದ್ರತಾಪಡೆಯ ಸಿಬ್ಬಂದಿಗಳು ಕ್ಯಾಬ್ ಗಾಜು ಒಡೆದು ಗಂಭೀರ ಗಾಯಗೊಂಡಿದ್ದ ಚಾಲಕ ಪ್ರತಾಪ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಚಾಲಕ ಪ್ರತಾಪ್ ಮೃತಪಟ್ಟಿದ್ದರು.

ಕೊರೊನಾ ನಂತರ ಬಾಡಿಗೆ ಕಡಿಮೆಯಾಗಿದ್ದ ಕಾರಣ ಪ್ರತಾಪ್ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಎನ್ನಲಾಗಿತ್ತು. ಸಂಸಾರ ನಿರ್ವಹಣೆ ಮತ್ತು ವಾಹನದ ಕಂತು ಕಟ್ಟುವ ಹೊರೆಯಿಂದ ಬೇಸರಗೊಂಡಿದ್ದ ಚಾಲಕ ಪ್ರತಾಪ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಕಾರಣ ಕೇಳಿಬಂದಿತ್ತು. ಚಾಲಕ ಪ್ರತಾಪ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಏರ್​ಪೋರ್ಟ್​ ಟ್ಯಾಕ್ಸಿಗಳನ್ನು ನಿಲ್ಲಿಸಿ ಧರಣಿ ನಡೆಸಿದ್ದರು. ಹೀಗಾಗಿ ಏರ್​ಪೋರ್ಟ್ ಪ್ರಯಾಣಿಕರಿಗೆ ಟ್ಯಾಕ್ಸಿ ಬಿಸಿ ತಟ್ಟಿತ್ತು. ಅಲ್ಲದೇ ಮೊನ್ನೆ ಸಂಜೆಯಿಂದಲೇ ಒಲಾ ಉಬರ್ ಮತ್ತು ಏರ್​ಪೋರ್ಟ್ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದರು.‘

ಇದನ್ನೂ ಓದಿ: ಏರ್​ಪೋರ್ಟ್ ಚಾಲಕ ಆತ್ಮಹತ್ಯೆ; ಪ್ರತಾಪ್ ಕುಟುಂಬಕ್ಕೆ ಧೈರ್ಯ ತುಂಬಿದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ

ಬಜೆಟ್​ ಬೆನ್ನಲ್ಲೇ.. ಟ್ಯಾಕ್ಸಿ ಪ್ರಯಾಣಿಕರಿಗೆ ದರದ ಬರೆ: ರಾಜ್ಯ ಸರ್ಕಾರದಿಂದ ನೂತನ ದರ ಪರಿಷ್ಕರಣೆ

Published On - 6:50 pm, Thu, 1 April 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ