AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TCS layoffs: ಟಿಸಿಎಸ್​ನಿಂದ 12 ಸಾವಿರ ಲೇಆಫ್, ವರದಿ ಕೇಳಿದ ಕರ್ನಾಟಕ ಸರ್ಕಾರ

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಸುಮಾರು 12 ಸಾವಿರ ಉದ್ಯೋಗಿಗಳ ಲೇಆಫ್ ಮಾಡಲಿದೆ ಎಂಬ ವಿಚಾರವಾಗಿ ಕರ್ನಾಟಕ ಕಾರ್ಮಿಕ ಇಲಾಖೆ ವಿವರ ಕೋರಿದೆ. ಕಂಪನಿಯ ಆಡಳಿತಕ್ಕೆ ನೋಟಿಸ್ ನೀಡಲಾಗಿದ್ದು, ಕಾರಣ ನೀಡುವಂತೆ ಮತ್ತು ಸಮಾಲೋಚನೆಗೆ ಬರುವಂತೆ ಸೂಚಿಸಲಾಗಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದಾರೆ.

TCS layoffs: ಟಿಸಿಎಸ್​ನಿಂದ 12 ಸಾವಿರ ಲೇಆಫ್, ವರದಿ ಕೇಳಿದ ಕರ್ನಾಟಕ ಸರ್ಕಾರ
ಟಿಸಿಎಸ್​ನಿಂದ 12 ಸಾವಿರ ಲೇಆಫ್, ವರದಿ ಕೇಳಿದ ಕರ್ನಾಟಕ ಸರ್ಕಾರ
ಗಣಪತಿ ಶರ್ಮಾ
|

Updated on: Aug 01, 2025 | 11:19 AM

Share

ಬೆಂಗಳೂರು, ಆಗಸ್ಟ್ 1: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ದೊಡ್ಡ ಪ್ರಮಾಣದಲ್ಲಿ ಲೇಆಫ್ (layoffs) (ಉದ್ಯೋಗ ಕಡಿತ) ಮಾಡುತ್ತಿರುವ ವರದಿಗಳ ಬಗ್ಗೆ ಕರ್ನಾಟಕ ಕಾರ್ಮಿಕ ಇಲಾಖೆ ವಿವರ ಕೋರಿದೆ. ಟಿಸಿಎಸ್ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂಬ ಮಾಹಿತಿ ದೊರೆತಿದೆ. ಈ ಕುರಿತು ಕಂಪನಿಯಿಂದ ವಿವರ ಕೋರಲಾಗಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಲೇಆಫ್​​​ಗೆ ಕಾರಣವನ್ನು ತಿಳಿಯಲು ಮತ್ತು ಆ ಬಗ್ಗೆ ಸಮಾಲೋಚನೆ ನಡೆಸಲು ಬರುವಂತೆ ನಮ್ಮ ಇಲಾಖೆಯು ಟಿಸಿಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ತಿಳಿಸಿದರು.

ಸನ್​ರೈಸ್ ಇಂಡಸ್ಟ್ರೀಸ್​ಗೆ ಕೆಲವೊಂದು ಷರತ್ತುಗಳೊಂದಿಗೆ ಕಾರ್ಮಿಕ ಕಾನೂನುಗಳಿಂದ ವಿನಾಯಿತಿ ನೀಡಲಾಗಿದೆ . ಕಳೆದ ಐದು ವರ್ಷಗಳಿಂದ ನಾವು ಸನ್​ರೈಸ್ ಇಂಡಸ್ಟ್ರೀಸ್​ಗೆ ವಿನಾಯಿತಿ ನೀಡುತ್ತಾ ಬಂದಿದ್ದೇವೆ. ಪ್ರತಿ ವರ್ಷ ಈ ವಿನಾಯಿತಿಯನ್ನು ವಿಸ್ತರಣೆ ಮಾಡುತ್ತಾ ಬರಲಾಗಿದೆ ಎಂದು ಲಾಡ್ ಹೇಳಿದರು.

ಅವರು ಯಾರನ್ನಾದರೂ ಕೆಲಸದಿಂದ ತೆಗೆದುಹಾಕಲು ಬಯಸಿದರೆ, ಅವರು ನಮಗೆ ಮಾಹಿತಿ ನೀಡಬೇಕು. ಆ ಬಗ್ಗೆ ನಾವು ಅವರೊಂದಿಗೆ ಮಾತನಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ
Image
ಫೋನ್​ನಲ್ಲಿ ಹರಟೆ ಹೊಡೆಯುತ್ತಾ ಜನರ ಸತಾಯಿಸಿದ ಕ್ಲರ್ಕ್: ವಿಡಿಯೋ ವೈರಲ್
Image
ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ
Image
ಕಾರ್ಮಿಕರಿಗೆ ಒತ್ತಡ ಹೇರಿ 10 ಗಂಟೆ ಕೆಲಸ ಮಾಡಿಸ್ಬೇಡಿ: ಸರ್ಕಾರ ಎಚ್ಚರಿಕೆ
Image
ಚಾಲಕರಿಗೆ ಕಡ್ಡಾಯ ಹೆಲ್ತ್ ಕಾರ್ಡ್: ಹೊಸ ನಿಯಮ ಕಡ್ಡಾಯಕ್ಕೆ ಚಿಂತನೆ

ಟಿಸಿಎಸ್ ಈ ವರ್ಷ ಜಾಗತಿಕವಾಗಿ ಶೇ 2 ರಷ್ಟು, ಅಂದರೆ ಸುಮಾರು 12,261 ಉದ್ಯೋಗಿಗಳನ್ನು ಲೇಆಫ್​ ಮಾಡಲು ಯೋಜಿಸಿರುವುದಾಗಿ ವರದಿಯಾಗಿದೆ. ಇದು ಮಿಡ್ ಕೆರಿಯರ್ ಲೆವೆಲ್ ಮತ್ತು ಸೀನಿಯರ್ ಸಿಬ್ಬಂದಿಯ ಮೇಲೆ ಪರಿಣಾಮ ಬೀರಲಿದೆ. 2025 ರ ಜೂನ್ 30 ರ ಹೊತ್ತಿಗೆ, ಟಿಸಿಎಸ್ ಒಟ್ಟು 6,13,069 ಉದ್ಯೋಗಿಗಳನ್ನು ಹೊಂದಿದೆ. ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 5,000 ಹೊಸ ಉದ್ಯೋಗಿಗಳನ್ನು ಸೇರಿಸಿಕೊಂಡಿದೆ.

ಇದನ್ನೂ ಓದಿ: Google Layoffs: ಗೂಗಲ್​​ನ ಆಂಡ್ರಾಯ್ಡ್, ಪಿಕ್ಸೆಲ್, ಕ್ರೋಮ್ ಟೀಮ್​​ಗಳಿಂದ ನೂರಾರು ಉದ್ಯೋಗಿಗಳ ಲೇಆಫ್

ಭವಿಷ್ಯದ ಯೋಜನೆಗಳಿಗೆ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಲೇಆಫ್ ಮಾಡಲಾಗುತ್ತಿದೆ ಎಂದು ಕಂಪನಿ ಹೇಳಿಕೊಂಡಿತ್ತು. ಎಐ ಅನುಷ್ಠಾನ, ತಂತ್ರಜ್ಞಾನ ಕ್ಷೇತ್ರದಲ್ಲಿನ ಹೂಡಿಕೆಗಳು, ಮಾರುಕಟ್ಟೆ ವಿಸ್ತರಣೆ ಮತ್ತು ಸಾಂಸ್ಥಿಕ ಪುನರ್ ರಚನೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಕಂಪನಿ ಹೇಳಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ