AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಟೀನೇಜ್ ಪ್ರೆಗ್ನೆನ್ಸಿ ಭಾರೀ ಹೆಚ್ಚಳ: ಬೆಚ್ಚಿಬೀಳಿಸುವಂತಿದೆ ಆರೋಗ್ಯ ಇಲಾಖೆ ಅಂಕಿಅಂಶ

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಾಯ್ತನದ ವಯಸ್ಸಿಗೂ ಮೊದಲೇ ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆಗಳಿಗೆ ಖುದ್ದು ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಟೀನೇಜ್ ಪ್ರೆಗ್ನೆನ್ಸಿ ಭಾರೀ ಹೆಚ್ಚಳ: ಬೆಚ್ಚಿಬೀಳಿಸುವಂತಿದೆ ಆರೋಗ್ಯ ಇಲಾಖೆ ಅಂಕಿಅಂಶ
ಟೀನೇಜ್ ಪ್ರೆಗ್ನೆನ್ಸಿ (ಸಾಂದರ್ಭಿಕ ಚಿತ್ರ)
Vinay Kashappanavar
| Updated By: Ganapathi Sharma|

Updated on:Aug 25, 2025 | 8:47 AM

Share

ಬೆಂಗಳೂರು, ಆಗಸ್ಟ್ 25: ಕೆಲವು ತಂದೆ-ತಾಯಿಗಳಿಗೆ ಮನೆಯ ಹೆಣ್ಣು ಮಕ್ಕಳಿಗೆ ಆದಷ್ಟು ಬೇಗ ಮದುವೆ ಮಾಡಿ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂಬ ಭಾವನೆ ಇರುತ್ತದೆ. ಶಿಕ್ಷಣದ ಕೊರತೆ, ಮೂಢನಂಬಿಕೆಗಳಿಂದಲೂ ಕೆಲವು ಪೋಷಕರು ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ. ಇನ್ನು ಕೆಲವು ದೌರ್ಜನ್ಯ ಹಾಗೂ ಪ್ರೇಮ ಪ್ರಕರಣಗಳ ಕಾರಣದಿಂದಲೂ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆಗೆ ಕಾರಣವಾಗುತ್ತಿದೆ. ಕರ್ನಾಟಕದಲ್ಲಿ (Karnataka) 18 ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ (Teenage Pregnancy) ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ, ಈ ಬಗ್ಗೆ ಗಮನಹರಿಸಬೇಕೆಂದು ಎಲ್ಲ ಇಲಾಖೆಗಳಿಗೆ ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿಯೂ ಹೆಚ್ಚುತ್ತಿದೆ ಟೀನೇಜ್ ಪ್ರೆಗ್ನೆನ್ಸಿ

ಬೆಂಗಳೂರಿನಲ್ಲಿಯೂ ವರ್ಷದಿಂದ ವರ್ಷಕ್ಕೆ ಟಿನೇಜ್ ಪ್ರಗ್ನೆನ್ಸಿ ಏರಿಕೆ ಕಾಣುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ಅರ್ಬನ್​ನಲ್ಲಿ 8891 ದಾಖಲಾಗಿವೆ. ಈ ವಿಚಾರವಾಗಿ ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳು ಆಘಾತಕಾರಿಯಾಗಿವೆ.

ಆರೇ ತಿಂಗಳಲ್ಲಿ 22000 ಟೀನೇಜ್ ಪ್ರೆಗ್ನೆನ್ಸಿ!

ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22000 ಸಾವಿರ ಹಾಗೂ ಬೆಂಗಳೂರು ಅರ್ಬನ್​​ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. ಹೀಗಾಗಿ ಆರೋಗ್ಯ ಇಲಾಖೆ ಕೂಡಾ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ಟೀನೇಜ್ ಪ್ರೆಗ್ನೆನ್ಸಿಗೆ ಪ್ರಮುಖ ಕಾರಣಗಳೇನು?

14 ನೇ ವಯಸ್ಸಿನಲ್ಲೇ ಅತಿ ಹೆಚ್ಚು ಬಾಲಕಿಯರು ಗರ್ಭಿಣಿ ಆಗುತ್ತಿದ್ದಾರೆ. ಅರಿವಿನ ಕೊರತೆ, ಪ್ರೊಟೆಕ್ಷನ್ ಕೊರತೆಯಿಂದ ಪ್ರಕರಣಗಳು ಹೆಚ್ಚಳ ಕಂಡಿವೆ. ಬಾಲ್ಯ ವಿವಾಹ, ಅನಕ್ಷರತೆ ಮತ್ತು ಬಡತನ, ವಲಸೆ ಹೋಗುವ ಪ್ರವೃತ್ತಿ ಸಾಮಾಜಿಕ ಅಭದ್ರತೆ, ಕುಟುಂಬ ಕಲ್ಯಾಣ ವಿಧಾನಗಳ ಅರಿವು ಇಲ್ಲದಿರುವುದು, ಹುಡುಗಿಯರ ಅಭಿಪ್ರಾಯಕ್ಕೆ ಮನ್ನಣೆ ನೀಡದಿರುವುದು ಟೀನೇಜ್ ಪ್ರೆಗ್ನೆನ್ಸಿಗೆ ಪ್ರಮುಖ ಕಾರಣಗಳಾಗಿವೆ. ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡಾ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.

ಇದನ್ನೂ ಓದಿ: ಜೀವಂತ ಕಂದಮ್ಮನಿಗೆ ಜನ್ಮ ನೀಡುವ ರೋಬೋಟ್, ಇನ್ನು ಮಹಿಳೆಯರ ಅಗತ್ಯವಿಲ್ಲ

ಬಾಲ ಗರ್ಭಿಣಿಯಾಗುವುದರಿಂದ ತಾಯಿ, ಮಗುವಿನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಮಗು ಜನನದ ಬಳಿಕ ಬಾಲ ಬಾಣಂತಿಯರು ರಕ್ತ ಹೀನತೆ, ಅಧಿಕ ರಕ್ತದೊತ್ತಡ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಭೀತಿ ಇದ್ದು, ಸರ್ಕಾರ ಈ ಬಗ್ಗೆ ತ್ವರಿತವಾಗಿ ಕ್ರಮಕ್ಕೆ ಮುಂದಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 am, Mon, 25 August 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ