AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐರನ್​ ಮ್ಯಾನ್​ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಪ್ರಧಾನಿ ಮೋದಿ ಶ್ಲಾಘನೆ

ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಸ್ಪರ್ಧೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಆ ಮೂಲಕ ಅವರು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತೇಜಸ್ವಿ ಸೂರ್ಯ ಸಾಧನೆಯನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ.

ಐರನ್​ ಮ್ಯಾನ್​ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಪ್ರಧಾನಿ ಮೋದಿ ಶ್ಲಾಘನೆ
ಐರನ್​ ಮ್ಯಾನ್​ ಸ್ಪರ್ಧೆ ಪೂರ್ಣಗೊಳಿಸಿದ ತೇಜಸ್ವಿ ಸೂರ್ಯ: ಪ್ರಧಾನಿ ಮೋದಿ ಶ್ಲಾಘನೆ
ಗಂಗಾಧರ​ ಬ. ಸಾಬೋಜಿ
|

Updated on: Oct 27, 2024 | 10:40 PM

Share

ಬೆಂಗಳೂರು, ಅಕ್ಟೋಬರ್ 27: ಇಂದು ಗೋವಾದಲ್ಲಿ ನಡೆದ ವಾಕಿಂಗ್, ಸ್ವಿಮ್ಮಿಂಗ್ ಹಾಗೂ ಸೈಕ್ಲಿಂಗ್​ ಮೂರು ರೀತಿಯ ಐರನ್​ ಮ್ಯಾನ್​ 70.3 ಸ್ಪರ್ಧೆಯಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಭಾಗವಹಿಸಿ, ಪೂರ್ಣಗೊಳಿಸುವ ಮೂಲಕ ವಿಜೇತರಾದ ಪ್ರಥಮ ಜನಪ್ರತಿನಿಧಿಯಾಗಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸ್ಪರ್ಧೆಯು 1.9 ಕಿಮೀ ಈಜು, 90 ಕಿಮೀ ಸೈಕ್ಲಿಂಗ್ ಮತ್ತು 21.1 ಕಿಮೀ ಓಟ ಸೇರಿದಂತೆ ಒಟ್ಟು 113 ಕಿಮೀ ದೂರ ಕ್ರಮಿಸಬೇಕಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಐರನ್​ ಮ್ಯಾನ್​ 70.3 ಗೋವಾ ಸ್ಪರ್ಧೆಯೂ ಕ್ರೀಡೆಗೆ ಹೆಚ್ಚು ಪ್ರಸಿದ್ಧವಾಗಿದೆ. ಈ ಸ್ಪರ್ಧೆಯಲ್ಲಿ 50 ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಭಾಗವಹಿಸುತ್ತಾರೆ. ಆ ಮೂಲಕ ಭಾರತ ಮತ್ತು ವಿಶ್ವದಾದ್ಯಂತ ಕ್ರೀಡಾಪಟುಗಳು ಮತ್ತು ಫಿಟ್ನೆಸ್​ ಪ್ರಿಯರ ಪ್ರಮುಖ ಸ್ಪರ್ಧೆ ಆಗಿದೆ ಎಂದಿದ್ದಾರೆ.

ಐರನ್​ ಮ್ಯಾನ್​ 70.3 ಗೋವಾ ಸ್ಪರ್ಧೆಯೂ ತುಂಬಾ ಕಠಿಣವಾಗಿದ್ದು, ಕಳೆದ 4 ತಿಂಗಳುಗಳಿನಿಂದ ನನ್ನ ಫಿಟ್ನೆಸ್​ಗಾಗಿ ನಾನು ಕಠಿಣ ತರಬೇತಿ ಪಡೆದಿದ್ದೇನೆ. ಇದರ ಪರಿಣಾಮವಾಗಿ ನಾನು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿದ್ದೇನೆ ಎಂದು ಹಂಚಿಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಫಿಟ್​ ಇಂಡಿಯಾ ಅಭಿಯಾನವೇ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ಎಂದು ಹೇಳಿದ್ದಾರೆ.

ದೊಡ್ಡ ಮಹತ್ವಾಕಾಂಕ್ಷೆಗಳು ಹೊತ್ತು ಬೆನ್ನಟ್ಟುತ್ತಿರುವ ಭಾರತವು ಯುವ ರಾಷ್ಟ್ರವಾಗಿ ರೂಪುಗೊಳಿಸುವಲ್ಲಿ ನಾವು ನಮ್ಮ ದೈಹಿಕ ಸಾಮರ್ಥ್ಯವನ್ನು ಪೋಷಿಸಬೇಕು ಮತ್ತು ಹೆಚ್ಚು ಆರೋಗ್ಯಕರ ರಾಷ್ಟ್ರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆ ನಿಟ್ಟಿನಲ್ಲಿ ಸದೃಢನಾಗುವ ಪ್ರಯತ್ನವು ನಿಮ್ಮನ್ನು ಹೆಚ್ಚು ಶಿಸ್ತುಬದ್ಧ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಇನ್ನು ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಸಂಸದ ತೇಜಸ್ವಿ ಸೂರ್ಯ ಅವರ ಈ ಸಾಧನೆವನ್ನು ಶ್ಲಾಘಿಸಿದ್ದಾರೆ. ಇದು ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳನ್ನು ಮುಂದುವರಿಸಲು ಇನ್ನೂ ಅನೇಕ ಯುವಕರಿಗೆ ಸ್ಫೂರ್ತಿ ನೀಡುತ್ತದೆ ಎಂಬುವುದು ನನಗೆ ಖಾತ್ರಿಯಿದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ತೇಜಸ್ವಿ ಸೂರ್ಯ ಮತ್ತೊಂದು ಟ್ವೀಟ್ ಮಾಡಿದ್ದು, ಸರ್, ನಿಮ್ಮ ಫಿಟ್ನೆಸ್ ಮತ್ತು ಎನರ್ಜಿ  ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ. ಖೇಲೋ ಇಂಡಿಯಾ ಮತ್ತು ಫಿಟ್ ಇಂಡಿಯಾ ಅಭಿಯಾನವೂ ದೈಹಿಕ ಸಾಮರ್ಥ್ಯಕ್ಕೆ ಆದ್ಯತೆ ನೀಡುತ್ತಿದ್ದು, ಇದರಿಂದ ಇಡೀ ದೇಶವೇ ಪ್ರಯೋಜನ ಪಡೆಯುತ್ತಿದೆ. ನಿಮ್ಮ ಕಾರ್ಯ ಯೋಜನೆಗಳನ್ನು ಮತ್ತಷ್ಟು ಮುಂದುವರಿಸಲು ಮತ್ತು ಹೆಚ್ಚಿನ ಯುವಕರನ್ನು ಫಿಟ್ನೆಸ್ ದಿನಚರಿಗಳಿಗೆ ತರಲು ನಾನು ಬಯಸುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು