AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Bellad: ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್

Telephone Tapping: ಜೈಲಿನಲ್ಲಿರೋ ಯುವರಾಜಸ್ವಾಮಿಯನ್ನು ಈಗಾಗಲೇ ವಿಚಾರಣೆ ಮಾಡಿರೋ ಎಸಿಪಿ ಪೃಥ್ವಿ ಅವರಿಗೆ ತಾನು ಕರೆ ಮಾಡಿಲ್ಲ, ಜೈಲಿನಲ್ಲಿ ಇದ್ದು ಹೇಗೆ ಕರೆ ಮಾಡಲಿ ಅಂತಾ ಯುವರಾಜ ಸ್ವಾಮಿ ತಿಳಿಸಿರುವುದಾಗಿ ವರದಿಯಾಗಿದೆ. ಮೇಲ್ನೋಟಕ್ಕೆ ಬೆಲ್ಲದ್ ಕೊಟ್ಟ ಮೊಬೈಲ್ ನಂಬರ್ ಮೂಲಕ ಕಾನ್ಫರೆನ್ಸ್ ಕಾಲ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Arvind Bellad: ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್
Arvind Bellad: ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್
TV9 Web
| Updated By: ಸಾಧು ಶ್ರೀನಾಥ್​|

Updated on: Jun 24, 2021 | 9:11 AM

Share

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಸಕ್ರಿಯವಾಗಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ ಅವರು ದಿಢೀರನೆ ದೂರವಾಣಿ ಕದ್ದಾಲಿಕೆ ಆರೋಪ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣವನ್ನು ವಾಪಸ್​ ತೆಗೆದುಕೊಳ್ಳುವ ಬಗ್ಗೆಯೂ ಆಲೋಚನೆ ನಡೆಸಿದ್ದಾರೆ. ಆದರೆ ಪ್ರಕರಣ ರಾಜಕೀಯವಾಗಿ ಸೂಕ್ಷವಾಗಿರುವುದರಿಂದ ತನಿಖಾ ಸಂಸ್ಥೆಗಳು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳಲು ನಿರ್ಧರಿಸಿವೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಶಾಸಕ ಬೆಲ್ಲದ್‌ಗೆ ನೋಟಿಸ್ ನೀಡಲಾಗಿದೆ.

ಪ್ರಕರಣ ಸಂಬಂಧ ಈ ಹಿಂದೆ ಶೇಷಾದ್ರಿಪುರಂ ಪೊಲೀಸ್​ ಠಾಣಾ ವ್ಯಾಪ್ತಿಯ ಎಸಿಪಿ ಪೃಥ್ವಿ ಮಾಹಿತಿ ಪಡೆಯಲಿದ್ದಾರೆ. ಈ ಹಿಂದೆ ಯುವರಾಜ ಸ್ವಾಮಿ ಹೆಸರಿನ ವ್ಯಕ್ತಿ ತಮಗೆ ಕರೆ ಮಾಡಿದ್ದನೆಂದು ಶಾಸಕ ಅರವಿಂದ ಬೆಲ್ಲದ್ ಪೊಲೀಸರಿಗೆ ದೂರು ನೀಡಿ, ಮಾಹಿತಿ ನೀಡಿದ್ದರು. ತಮಗೆ ಕರೆ ಮಾಡಿದ್ದ ಮೊಬೈಲ್​ ನಂಬರ್ ಅನ್ನು ಸಹ​ ತನಿಖಾಧಿಕಾರಿಗೆ ನೀಡಿದ್ದರು.

ಬೆಲ್ಲದ್​ ನೀಡಿದ್ದ ನಂಬರ್ ಆಧರಿಸಿ ಪರಪ್ಪನ ಅಗ್ರಹಾರ ಜೈಲಲ್ಲಿರುವ ಯುವರಾಜ ಸ್ವಾಮಿಯನ್ನು ಎಸಿಪಿ ಯತಿರಾಜ್ ಸುಮಾರು ಒಂದೂವರೆ ಗಂಟೆ ಕಾಲ ವಿಚಾರಣೆ ನಡೆಸಿದ್ದಾರೆ. ಯುವರಾಜ ಸ್ವಾಮಿ ಗಣ್ಯ ವ್ಯಕ್ತಿಗಳಿಗೆ ವಂಚಿಸಿರುವ ನಾನಾ ಪ್ರಕರಣಗಳಲ್ಲಿ ಜೈಲುಪಾಲಾಗಿದ್ದು, ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾನೆ. ಪ್ರಕರಣ ಸಂಬಂಧ ಇದೀಗ ಮತ್ತೊಮ್ಮೆ BJP ಶಾಸಕ ಅರವಿಂದ ಬೆಲ್ಲದ್ ಅವರನ್ನು ಇಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಆಪ್ತ ಅರ್ಚಕನೇ ಕರೆ ಮಾಡಿದ್ದನಾ ಹೈದರಾಬಾದಿನಿಂದ? ಫೋನ್ ಕದ್ದಾಲಿಕೆ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿರೋ ಯುವರಾಜ ಸ್ವಾಮಿ ಕರೆ ಮಾಡಿದ್ದಾಗಿ ಬೆಲ್ಲದ್ ಹೇಳಿದ್ದರು. ಆತನ ಮೂಲಕ ಟ್ರ್ಯಾಪ್ ಮಾಡಲು ಪಯತ್ನ ನಡೆಯುತ್ತಿರೋ ಸಾಧ್ಯತೆಯಿದೆ ಅಂದಿದ್ದರು. ಯುವರಾಜ್ ಸ್ವಾಮಿ ಅಂತಾ ಹೇಳಿ ಕರೆ ಮಾಡಿದ್ದ ನಂಬರ್ ಅನ್ನು ಪೊಲೀಸರಿಗೆ ಬೆಲ್ಲದ ನೀಡಿದ್ದರು. ಆದ್ರೆ ಆ ನಂಬರ್ ಆಂಧ್ರ ಮೂಲದ ಅರ್ಚಕನದ್ದು ಅಂತ ತನಿಖೆ ವೇಳೆ ಬಯಲಿಗೆ ಬಂದಿತ್ತು. ಮತ್ತು ಆ ಅರ್ಚಕ ಶಾಸಕ ಬೆಲ್ಲದ್​ ಅವರ ಆಪ್ತ ಎಂದು ತಿಳಿದುಬಂದಿದೆ.

ಜೈಲಿನಲ್ಲಿರೋ ಯುವರಾಜಸ್ವಾಮಿಯನ್ನು ಈಗಾಗಲೇ ವಿಚಾರಣೆ ಮಾಡಿರೋ ಎಸಿಪಿ ಪೃಥ್ವಿ ಅವರಿಗೆ ತಾನು ಕರೆ ಮಾಡಿಲ್ಲ, ಜೈಲಿನಲ್ಲಿ ಇದ್ದು ಹೇಗೆ ಕರೆ ಮಾಡಲಿ ಅಂತಾ ಯುವರಾಜ ಸ್ವಾಮಿ ತಿಳಿಸಿರುವುದಾಗಿ ವರದಿಯಾಗಿದೆ. ಮೇಲ್ನೋಟಕ್ಕೆ ಬೆಲ್ಲದ್ ಕೊಟ್ಟ ಮೊಬೈಲ್ ನಂಬರ್ ಮೂಲಕ ಕಾನ್ಫರೆನ್ಸ್ ಕಾಲ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಯಾವ ನಂಬರ್ ನಿಂದ ಕರೆ ಮಾಡಿದ್ರು? ಏನ್ ಮಾತಾಡಿದ್ರು ಅಂತಾ ಮತ್ತೊಮ್ಮೆ ಬೆಲ್ಲದ್ ಅವರಿಂದ ಎಸಿಪಿ ಪೃಥ್ವಿ ಮಾಹಿತಿ ಪಡೆಯುವ ಸಾಧ್ಯತೆಯಿದೆ.

ನನ್ನ ಫೋನ್​ ಟ್ಯಾಪ್ ಆಗಿರುವ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡುವೆ: ಶಾಸಕ ಅರವಿಂದ್ ಬೆಲ್ಲದ್

(telephone tapping case bjp mla arvind bellad summoned by seshadripuram police acp)

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ