AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಕೇಂದ್ರಗಳ ತೆರವಿಗೆ ಹೊಸ ನಿಯಮಾವಳಿ ರೂಪಿಸಲು ಸರ್ಕಾರ ನಿರ್ಧಾರ; ವಿಧೇಯಕ ಮಂಡನೆ

ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿದ ಬಳಿಕ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳನ್ನ ಹೊಸದಾಗಿಯೂ ನಿರ್ಮಿಸಲು ಅವಕಾಶ ಇರುವುದಿಲ್ಲ. ಸರ್ಕಾರಕ್ಕೆ ಸೇರಿದ ಜಾಗದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಂದೆ ಧಾರ್ಮಿಕ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ.

ಧಾರ್ಮಿಕ ಕೇಂದ್ರಗಳ ತೆರವಿಗೆ ಹೊಸ ನಿಯಮಾವಳಿ ರೂಪಿಸಲು ಸರ್ಕಾರ ನಿರ್ಧಾರ; ವಿಧೇಯಕ ಮಂಡನೆ
(ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Sep 20, 2021 | 7:19 PM

Share

ಬೆಂಗಳೂರು: ದೇಗುಲಗಳ ತೆರವು ವಿಚಾರವಾಗಿ ಇತ್ತೀಚೆಗೆ ಬಹಳಷ್ಟು ವಾದ- ವಿವಾದ ಸೃಷ್ಟಿಯಾಗಿದ್ದವು. ಈ ಬಗ್ಗೆ ವಿಧೇಯಕದ ಮೂಲಕ ಹೊಸ ನಿಯಮಾವಳಿ ರೂಪಿಸಲು ಇದೀಗ ಸರ್ಕಾರ ನಿರ್ಧಾರ ಕೈಗೊಂಡಿದೆ. ಅದರಂತೆ ಕೋರ್ಟ್​​ ತೀರ್ಪು ಇದ್ದರೂ ಸರ್ಕಾರದ ನಿಯಮಗಳಿಗೆ ಒಳಪಟ್ಟಂತೆ ಆಯಾ ಧಾರ್ಮಿಕ ಸ್ಥಳ ಇದ್ದರೆ ಅಂತಹ ಧಾರ್ಮಿಕ ಸಂಸ್ಥೆಗಳನ್ನ ತೆರವು ಮಾಡುವಂತಿಲ್ಲ ಎಂದು ಹೊಸ ನಿಯಮಾವಳಿ ರೂಪಿಸಲು ಸರ್ಕಾರ ತೀರ್ಮಾನಿಸಿದೆ.

ಸರ್ಕಾರದ ನಿಯಮಗಳಿಂದ ಹೊರಗಿದ್ದರೆ ಮಾತ್ರ ಅಂತಹ ಧಾರ್ಮಿಕ ಸ್ಥಳ ತೆರವು ಮಾಡಬಹುದು. ಅಂತಹ ಧಾರ್ಮಿಕ‌ ಸಂಸ್ಥೆಗಳ ಕಟ್ಟಡಗಳು ಮಾತ್ರ ತೆರವು ಮಾಡಬಹುದು. ವಿಧೇಯಕ ಅಂಗೀಕಾರಗೊಂಡ ಬಳಿಕ ಈ ನಿಯಮಾವಳಿ ಜಾರಿ ಆಗಲಿದೆ. ಶೀಘ್ರದಲ್ಲೇ ಸರ್ಕಾರ ನಿಯಮಾವಳಿ ರೂಪಿಸುವ ಸಾಧ್ಯತೆ ಇದೆ.

ವಿಧೇಯಕದ ಮೂಲಕ ಹೊಸ ನಿಯಾಮವಳಿ ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ. ನ್ಯಾಯಾಲಯದ ತೀರ್ಪು ಇದ್ದರೂ ಸರ್ಕಾರದ ನಿಯಮಗಳಿಗೆ ಒಳಪಟ್ಟಂತೆ ಇದ್ದರೆ ಆ ಧಾರ್ಮಿಕ ಸಂಸ್ಥೆಗಳನ್ನ ತೆರವು ಮಾಡುವಂತಿಲ್ಲ. ಸರ್ಕಾರದ ನಿಯಮಾವಳಿಯಿಂದ ಹೊರಗೆ ಇದ್ದರೆ ಆ ಧಾರ್ಮಿಕ‌ ಸಂಸ್ಥೆಗಳ ಕಟ್ಟಡಗಳು ಮಾತ್ರ ತೆರವು ಮಾಡಬಹುದು. ಈ ವಿಧೇಯಕ ಅಂಗೀಕಾರಗೊಂಡ ಬಳಿಕ ಶೀಘ್ರದಲ್ಲೇ ನಿಯಮಾವಳಿ ರೂಪಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿದ ಬಳಿಕ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳನ್ನ ಹೊಸದಾಗಿಯೂ ನಿರ್ಮಿಸಲು ಅವಕಾಶ ಇರುವುದಿಲ್ಲ. ಸರ್ಕಾರಕ್ಕೆ ಸೇರಿದ ಜಾಗದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಂದೆ ಧಾರ್ಮಿಕ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ.

ವಿಧಾನಸಭೆಯಲ್ಲಿ ಇನ್ನೂ ಕೆಲವು ತಿದ್ದುಪಡಿ ವಿಧೇಯಕಗಳ ಮಂಡನೆ ಆಗಿದೆ. ಪಟ್ಟಣ ಮತ್ತು ಗ್ರಾಮಾಂತರ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ‌ ಮಂಡನೆ ಆಗಿದೆ. ವಿಧಾನಸಭೆಯಲ್ಲಿ ಈ ತಿದ್ದುಪಡಿ ವಿಧೇಯಕ‌ಗಳು ಮಂಡನೆಯಾಗಿವೆ.

ಹುಚ್ಚಗಣಿ ಮಹದೇವಮ್ಮ ದೇಗುಲ ಮರುನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮನವಿ ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರವಾಗಿ ದೇಗುಲ ಮರುನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ನಂಜನಗೂಡು ಶಾಸಕ ಹರ್ಷವರ್ಧನ್ ಮನವಿ ಮಾಡಿದ್ದಾರೆ. 20 ಲಕ್ಷ ಅನುದಾನ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಕಡತ ಮಂಡಿಸಿ ಮುಂದಿನ ಕ್ರಮಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗ್ರಾಮದ ಹುಲ್ಲಹಳ್ಳಿಯ ಹುಚ್ಚಗಣಿ ಮಹದೇವಮ್ಮ ದೇಗುಲ ಇತ್ತೀಚೆಗಷ್ಟೇ ತೆರವಾಗಿತ್ತು. ಆ ಬಗ್ಗೆ ವಾದ- ವಿವಾದವೂ ಏರ್ಪಟ್ಟಿತ್ತು.

ವಿಧಾನ ಪರಿಷತ್​​ನಲ್ಲಿ ಕೆಲವು ತಿದ್ದುಪಡಿ ವಿಧೇಯಕ ಮಂಡನೆ ಬಂಧಿಗಳ ಗುರುತಿಸುವಿಕೆ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್​​ನಲ್ಲಿ ಮಂಡನೆ ಆಗಿದೆ. ಪರಿಷತ್​​ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ವಿವರಿಸಿದ್ದಾರೆ. ಆರೋಪಿಯ ರಕ್ತದ ಮಾದರಿ, ಧ್ವನಿ ಮಾದರಿ, ಡಿಎನ್​ಎ ಮಾದರಿ, ಕಣ್ಣಿನ ಪಾಪೆ ಮಾದರಿ ಸಂಗ್ರಹ ವಿಧಾನಕ್ಕೆ ತಿದ್ದುಪಡಿ ಮಾಡಲಾಗಿದೆ. ಬಂಧಿಗಳ ಗುರುತಿಸುವಿಕೆ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ವಿಧಾನ ಪರಿಷತ್​ನಲ್ಲಿ ಬೆಂಗಳೂರು ನೀರು ಸರಬರಾಜು, ಗ್ರಾಮಸಾರ ಒಳಚರಂಡಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ.

ಇದನ್ನೂ ಓದಿ: ಕುಮಾರವ್ಯಾಸನ ಪದ್ಯ ಓದಿ ಸಿದ್ದರಾಮಯ್ಯಗೆ ಟಾಂಗ್; ಮೋದಿ ಪ್ರಧಾನಿ ಆದ್ಮೇಲೆ ದೇಶದ ಬೆಲೆ ಹೆಚ್ಚಾಗಿದೆ: ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಮುಜರಾಯಿ ದೇಗುಲ ಅರ್ಚಕರಿಗೆ ಬಿಡುಗಡೆಯಾಗದ ತಸ್ತೀಕ್: ಕಾಂಗ್ರೆಸ್ ಆಕ್ರೋಶ 

Published On - 6:39 pm, Mon, 20 September 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್