AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆ: ಸರ್ಕಾರ ಆದೇಶ

ಸಿವಿಲ್ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಇದಕ್ಕೆ ಕಾರಣವೇನು ಎಂಬುದನ್ನೂ ತಿಳಿಸಿದೆ. ಮೀಸಲಾತಿಗೆ ಸರ್ಕಾರ ತಡೆಯೊಡ್ಡಿದ್ದೇಕೆ? ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲೇನಿದೆ ಎಂಬ ವಿವರಗಳು ಇಲ್ಲಿವೆ.

ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆ: ಸರ್ಕಾರ ಆದೇಶ
ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿದ್ದ ಶೇ 2 ರ ಮೀಸಲಾತಿಗೆ ತಾತ್ಕಾಲಿಕ ತಡೆ
ಕಿರಣ್​ ಹನಿಯಡ್ಕ
| Edited By: |

Updated on: Dec 05, 2024 | 11:13 AM

Share

ಬೆಂಗಳೂರು, ಡಿಸೆಂಬರ್ 5: ಮಹತ್ವದ ಬೆಳವಣಿಗೆಯೊಂದರಲ್ಲಿ, ಕ್ರೀಡಾ ಸಾಧಕರಿಗೆ ನೇಮಕಾತಿಯಲ್ಲಿ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆಯೊಡ್ಡಿದೆ. ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ನೀಡಲಾಗುತ್ತಿತ್ತು. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ತಾತ್ಕಾಲಿಕ ತಡೆ ನೀಡಿ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರ್ಕಾರದ ಸುತ್ತೋಲೆಯಲ್ಲೇನಿದೆ?

ದಿನಾಂಕ 18.09.2024 ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನೆನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ವಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ವಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃ೦ದ ಬಲದಲ್ಲಿ ಶೇಕಡ 2 ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಆದರೆ, ಸರ್ಕಾರವು ಸೆಪ್ಟೆಂಬರ್ 18 ರ ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2 ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ 18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್​ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು