AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ.. 10 ಶಾಲೆ ಲಾಕ್​ಡೌನ್​: ಪೋಷಕರಲ್ಲಿ ಹೆಚ್ಚಿದ ಆತಂಕ

ಶಾಲೆ ಪ್ರಾರಂಭವಾದ ಬಳಿಕ ಏಳು ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪ್ರಾಥಮಿಕ ಶಾಲೆಯ 7 ಮಂದಿ ಮತ್ತು ಪ್ರೌಢಶಾಲೆಯ 3 ಮಂದಿ‌ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದೆ. ಶಾಲೆ ಆರಂಭಕ್ಕೂ ಮುನ್ನ 3 ಮಂದಿ ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು.

ಹಾಸನ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ.. 10 ಶಾಲೆ ಲಾಕ್​ಡೌನ್​: ಪೋಷಕರಲ್ಲಿ ಹೆಚ್ಚಿದ ಆತಂಕ
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on: Jan 06, 2021 | 11:56 AM

Share

ಹಾಸನ: ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಜಿಲ್ಲೆಯ ಹತ್ತು ಶಾಲೆಗಳನ್ನು ಲಾಕ್​ಡೌನ್​ ಮಾಡಲಾಗಿದೆ.

ಹಾಸನ ಜಿಲ್ಲೆಯ ಡಿಡಿಪಿಐ ಪ್ರಕಾಶ್ ಟಿವಿ9 ಗೆ ಮಾಹಿತಿ ನೀಡಿದ್ದು, ಶಾಲೆ ಪ್ರಾರಂಭವಾದ ಬಳಿಕ ಏಳು ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪ್ರಾಥಮಿಕ ಶಾಲೆಯ 7 ಮಂದಿ ಮತ್ತು ಪ್ರೌಢಶಾಲೆಯ 3 ಮಂದಿ‌ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದೆ. ಶಾಲೆ ಆರಂಭಕ್ಕೂ ಮುನ್ನ 3 ಮಂದಿ ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ 3 ಮಂದಿ ಶಿಕ್ಷಕರು ಶಾಲೆಗೆ ಹಾಜರಾಗಿರಲಿಲ್ಲಾ.

ಶಾಲೆ ಆರಂಭವಾದ ಬಳಿಕ ಎರಡು ದಿನಗಳಿಂದ 7 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್​ ಆಗಿರುವುದರಿಂದ ಸಂಕಷ್ಟ ಎದುರಾಗಿದೆ. ಚನ್ನರಾಯಪಟ್ಟಣ ತಾಲೂಕಿನ 3, ಹಾಸನ ತಾಲೂಕಿನ 2 ಹಾಗೂ ಹೊಳೆನರಸೀಪುರ ತಾಲೂಕಿನ 2 ಶಿಕ್ಷಕರಿಗೆ ಸೋಂಕು ತಗುಲಿದೆ. ಹೀಗಾಗಿ ಹೊಳೆನರಸೀಪುರ, ಚನ್ನರಾಯಪಟ್ಟಣ, ಹಾಸನ ತಾಲೂಕಿನ 7 ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ನೀಡಿ ಆದೇಶ ಹೊರಡಿಸಿದೆ. ಮುಂದಿನ ಮೂರು ದಿನ ರಜೆ ನೀಡಿ ಬಳಿಕ ಪರಿಸ್ಥಿತಿ ನೋಡಿಕೊಂಡು ಶಾಲೆ ತೆರೆಯಲು ನಿರ್ದಾರ ಮಾಡಲಾಗಿದೆ. ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಒಂದೇ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್: ಜ.8ರವರೆಗೆ ಶಾಲೆ ಬಂದ್

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ