Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ. ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ. ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ […]

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ
Follow us
ಸಾಧು ಶ್ರೀನಾಥ್​
|

Updated on: May 05, 2020 | 10:07 AM

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ.

ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ.

ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ ಹರಡುತ್ತೇನೋ ಅನ್ನೋ ಭೀತಿ ಶುರುವಾಗಿದೆ. ಸಮುದಾಯಕ್ಕೆ ಹರಡಿದ್ರೆ ಮೆಡಿಕಲ್ ವಾರಿಯರ್ಸ್ ಮೇಲೆ ತೀವ್ರ ಒತ್ತಡ ಬೀಳಲಿದೆ.

ಈಗಾಗಲೇ ಕಳೆದೆರೆಡು ತಿಂಗಳಿಂದ ಹೆಲ್ತ್ ವಾರಿಯರ್ಸ್ ರೆಸ್ಟ್ ಮಾಡದೆ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರು, ನರ್ಸ್​ಗಳ ಮೇಲೆ ಹೆಚ್ಚು ಒತ್ತಡ ಬಿದ್ರೆ ಸೋಂಕಿತರನ್ನ ಕಂಟ್ರೋಲ್ ಮಾಡೋದು ಕಷ್ಟ. ಸೋಂಕಿತರು ಹೆಚ್ಚಾದ್ರೆ ಸಾವು ನೋವುಗಳು ಕೂಡ ಹೆಚ್ಚಾಗುವ ಸಾಧ್ಯತೆ ಇದೆ.

ಇದೇ ರೀತಿ ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ಮಾಸ್ಕ್ ಧರಿಸದೆ ಓಡಾಡಿದ್ರೆ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಜನ ಯಾಮಾರಬೇಡಿ ಕೊರೊನಾ ಇನ್ನು ಮಾಯವಾಗಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಎಚ್ಚರಿಸಿದ್ದಾರೆ.

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ