ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ. ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ. ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ […]

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಸಡಿಲಿಕೆ, ಹೆಚ್ಚಾಯ್ತು ಆತಂಕ
ಸಾಧು ಶ್ರೀನಾಥ್​

Updated on: May 05, 2020 | 10:07 AM

ಬೆಂಗಳೂರು: ಆರೋಗ್ಯ ಇಲಾಖೆಗೆ ಫುಲ್ ಟೆನ್ಶನ್ ಶುರುವಾಗಿದೆ. ಯಾಕಂದ್ರೆ ರಾಜ್ಯ ಸರ್ಕಾರ ಮೂರನೇ ಹಂತದ ಲಾಕ್​ಡೌನ್ ಸಡಲಿಕೆ ಮಾಡಿದೆ. ಇದರಿಂದ ಜನರು ರಸ್ತೆಗಿಳೀತಿದ್ದಾರೆ. ಕೊರೊನಾ ಭೀತಿ ಇದ್ದರೂ ತಿರುಗಾಡುತ್ತಿದ್ದಾರೆ.

ಮದ್ಯದಂಗಡಿಗಳ ಮುಂದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಸಾಮಾಜಿಕ ಅಂತರ ಮರೆತು ಖರೀದಿಗೆ ಮುಂದಾಗಿದ್ದಾರೆ. ಒಬ್ಬ ಕೊರೊನಾ ಸೋಂಕಿತನಿಂದ 30 ಜನರಿಗೆ ಸೋಂಕು ಹರಡುತ್ತೆ. ಹೀಗಾಗಿ ಕೊರೊನಾ ಸೋಂಕಿತರನ್ನ ಪತ್ತೆಹಚ್ಚಲು ಹರಸಾಹಸ ಮಾಡಬೇಕಾಗುತ್ತೆ.

ಇನ್ನು ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರದಿದ್ರೂ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಇದರಿಂದ ಸೋಂಕು ಸಮುದಾಯಕ್ಕೆ ಹರಡುತ್ತೇನೋ ಅನ್ನೋ ಭೀತಿ ಶುರುವಾಗಿದೆ. ಸಮುದಾಯಕ್ಕೆ ಹರಡಿದ್ರೆ ಮೆಡಿಕಲ್ ವಾರಿಯರ್ಸ್ ಮೇಲೆ ತೀವ್ರ ಒತ್ತಡ ಬೀಳಲಿದೆ.

ಈಗಾಗಲೇ ಕಳೆದೆರೆಡು ತಿಂಗಳಿಂದ ಹೆಲ್ತ್ ವಾರಿಯರ್ಸ್ ರೆಸ್ಟ್ ಮಾಡದೆ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರು, ನರ್ಸ್​ಗಳ ಮೇಲೆ ಹೆಚ್ಚು ಒತ್ತಡ ಬಿದ್ರೆ ಸೋಂಕಿತರನ್ನ ಕಂಟ್ರೋಲ್ ಮಾಡೋದು ಕಷ್ಟ. ಸೋಂಕಿತರು ಹೆಚ್ಚಾದ್ರೆ ಸಾವು ನೋವುಗಳು ಕೂಡ ಹೆಚ್ಚಾಗುವ ಸಾಧ್ಯತೆ ಇದೆ.

ಇದೇ ರೀತಿ ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿ ಮಾಸ್ಕ್ ಧರಿಸದೆ ಓಡಾಡಿದ್ರೆ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಜನ ಯಾಮಾರಬೇಡಿ ಕೊರೊನಾ ಇನ್ನು ಮಾಯವಾಗಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಎಚ್ಚರಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us