ದಾವಣಗೆರೆಯಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿತ್ತಾ?

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕೆಟಿಜೆ ನಗರದ 17ನೇ ಕ್ರಾಸ್​ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್​ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ […]

ದಾವಣಗೆರೆಯಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆ ಲೀಕ್​ ಆಗಿತ್ತಾ?
ಸಾಧು ಶ್ರೀನಾಥ್​

Updated on: Sep 28, 2019 | 4:52 PM

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಕೆಟಿಜೆ ನಗರದ 17ನೇ ಕ್ರಾಸ್​ನ ಮನೆಯೊಂದರಲ್ಲಿ ಟಿಇಟಿ ಪ್ರಶ್ನೆ ಪತ್ರಿಕೆಯ ಬಂಡಲ್​ಗಳು ಪತ್ತೆಯಾಗಿವೆ. ಮೇ 26 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಟಿಇಟಿ ಪರೀಕ್ಷೆ ನಡೆಸಿತ್ತು. ಇದೀಗ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿವೆ. ಟಿಇಟಿ ಪರೀಕ್ಷೆಗೂ ಮೊದಲೇ ಪ್ರಶ್ನೆ ಪ್ರತ್ರಿಕೆಗಳು ಸೋರಿಕೆಯಾಗಿದ್ವಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೆಟಿಜೆ ನಗರ ಪೊಲೀಸರು ಪ್ರಶ್ನೆ ಪತ್ರಿಕೆಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us