AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thawar Chand Gehlot: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ನೇಮಕ

Thawar Chand Gehlot: 84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗಿದ್ದಾರೆ.

Thawar Chand Gehlot: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ನೇಮಕ
ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕ
TV9 Web
| Edited By: |

Updated on:Jul 06, 2021 | 8:38 PM

Share

ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ (Thawar Chand Gehlot)​ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಥಾವರಚಂದ್ ಗೆಹಲೋತ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಅಧಿಕಾರ ಸ್ವೀಕರಿಸಲಿದ್ದಾರೆ.

ಕರ್ನಾಟಕ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗುವ ಜತೆಗೆ ಒಟ್ಟು 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ. ಜಾರ್ಖಂಡ್​, ಹರಿಯಾಣ, ಮಿಜೋರಾಂ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗೋವಾ, ತ್ರಿಪುರಾ ರಾಜ್ಯಗಳಿಗೂ ಹೊಸ ರಾಜ್ಯಪಾಲರು ನೇಮಕವಾಗಿದ್ದಾರೆ. ಮಿಜೋರಾಂಗೆ ಹರಿಬಾಬು ಕಂಭಂಪತಿ, ಮಧ್ಯಪ್ರದೇಶಕ್ಕೆ ಮಂಗೂಭಾಯ್ ಛಗನ್‌ಭಾಯ್ ಪಟೇಲ್, ಹಿಮಾಚಲಪ್ರದೇಶಕ್ಕೆ ರಾಜೇಂದ್ರನ್ ವಿಶ್ವನಾಥ್ ಅರ್ಲೇಕರ್, ಗೋವಾಕ್ಕೆ ಪಿ.ಎಸ್.ಶ್ರೀಧರನ್ ಪಿಳ್ಳೈ, ತ್ರಿಪುರಾಕ್ಕೆ ಸತ್ಯದೇವ್ ನಾರಾಯಣ್ ಆರ್ಯ, ಜಾರ್ಖಂಡ್​ಗೆ ರಮೇಶ್ ಬೈಸ್, ಹರಿಯಾಣಕ್ಕೆ ಬಂಡಾರು ದತ್ತಾತ್ತ್ರೇಯ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್​ ಸದ್ಯ ಕೇಂದ್ರ ಸಚಿವರಾಗಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರೂ ಆಗಿರುವ ಅವರು ಈ ಹಿಂದೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಸಂಘ ಪರಿವಾರದ ಹಿನ್ನೆಲೆಯ ಥಾವರಚಂದ್ ಗೆಹಲೋತ್, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: ರಾಜ್ಯಪಾಲ ಹುದ್ದೆಗೋಸ್ಕರ ಹೈಕೋರ್ಟ್ ಮಾಜಿ ನ್ಯಾಯಾಧೀಶರು ಓರ್ವ ಮಧ್ಯವರ್ತಿಗೆ ಲಂಚ ನೀಡುವುದು ಖೇದಕರ; ಹೈಕೋರ್ಟ್

Published On - 12:24 pm, Tue, 6 July 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ