AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thawarchand Gehlot: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್

ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್ ಇಂದು (ಜುಲೈ 19) ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

Thawarchand Gehlot: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್
ಥಾವರಚಂದ ಗೆಹಲೋತ್ ಹಾಗೂ ನರೇಂದ್ರ ಮೋದಿ
TV9 Web
| Edited By: |

Updated on:Jul 19, 2021 | 5:51 PM

Share

ದೆಹಲಿ: ಥಾವರಚಂದ್ ಗೆಹಲೋತ್ ರಾಜೀನಾಮೆ ಅಂಗೀಕಾರ ಆಗಿರುವ ಬಗ್ಗೆ ರಾಜ್ಯಸಭೆಗೆ ಸಭಾಪತಿ ವೆಂಕಯ್ಯ ನಾಯ್ಡು ಮಾಹಿತಿ ತಿಳಿಸಿದ್ದಾರೆ. ರಾಜ್ಯಸಭಾ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆ ಜುಲೈ 7ರಂದು ಅಂಗೀಕಾರ ಆಗಿದೆ. ಪ್ರಸ್ತುತ ಕರ್ನಾಟಕದ ರಾಜ್ಯಪಾಲರಾಗಿರುವ ಥಾವರಚಂದ್ ಗೆಹಲೋತ್ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ. ಗೆಹಲೋತ್ ರಾಜ್ಯಪಾಲರಾಗುವ ಮುನ್ನ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹಲೋತ್ ಇಂದು (ಜುಲೈ 19) ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

ಕರ್ನಾಟಕ ರಾಜ್ಯದ 19ನೇ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ (Thawarchand Gehlot) ಜುಲೈ 11ರಂದು ನೇಮಕವಾಗಿದ್ದರು. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಥಾವರಚಂದ್ ಗೆಹಲೋತ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಭಾನುವಾರ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ಹೈಕೋರ್ಟ್​ ಸಿಜೆ ಎ.ಎಸ್.ಒಕಾ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದರು.

84 ವರ್ಷದ ವಜೂಬಾಯಿ ವಾಲಾ ಅವರು (Vajubhai Rudabhai Vala) 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್​ ನೇಮಕವಾಗಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್​ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರೂ ಆಗಿರುವ ಅವರು ಈ ಹಿಂದೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಸಂಘ ಪರಿವಾರದ ಹಿನ್ನೆಲೆಯ ಥಾವರಚಂದ್ ಗೆಹಲೋತ್, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: Thawar Chand Gehlot: ಸಂಘ ಪರಿವಾರ ಹಿನ್ನೆಲೆಯ ಥಾವರಚಂದ್ ಗೆಹಲೋತ್ ಈ ಹಿಂದೆಯೂ ಕರ್ನಾಟಕದೊಂದಿಗೆ ಸಂಪರ್ಕದಲ್ಲಿದ್ದರು

Thawar Chand Gehlot: ಕರ್ನಾಟಕದ 19ನೇ ರಾಜ್ಯಪಾಲರಾಗಿ ಜುಲೈ 11ರಂದು ಥಾವರಚಂದ್ ಗೆಹಲೋತ್ ಪದಗ್ರಹಣ

Published On - 5:49 pm, Mon, 19 July 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​