ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ!

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್(55) ಅನ್ನು ಎನ್ಐಎ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಆಗುವಾಗ ದೆಹಲಿ ಏರ್​ಪೋರ್ಟ್​ನಲ್ಲಿ ಮೊಹಮ್ಮದ್ ಷರೀಫ್ ಬಂಧಿಸಿದ ಎನ್ಐಎ ಅಧಿಕಾರಿಗಳು, ಆತನ ಪತ್ತೆಗಾಗಿ ರಾಷ್ಟ್ರೀಯ ತನಿಖಾ ದಳ 5 ಲಕ್ಷ ರೂ. ಬಹುಮಾನ ಘೋಷಿಸಿದ್ದರು.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ!
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ!
Edited By:

Updated on: Dec 20, 2024 | 3:45 PM

ಮಂಗಳೂರು, ಡಿಸೆಂಬರ್​ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ.

ಈತನ ಪತ್ತೆಗಾಗಿ ಎನ್​ಐಎ‌ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್​ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಸಹಚರರ ಸ್ಥಳಗಳ ಮೇಲೆ NIA ದಾಳಿ, ದಾಖಲೆಗಳು ಜಪ್ತಿ

ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್​ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್​​​ಐಎ ಅಧಿಕಾರಿಗಳು ದಾಳಿ ಮಾಡಿದ್ದರು. ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಇಬ್ಬರು ಆರೋಪಿಗಳು ಆಶ್ರಯ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿರುವ ಆರೋಪಿ ನೌಷದ್ ಮನೆ ಮೇಲೆ ಕೂಡ ಎನ್​ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಕುಟುಂಬ ಪರಾರಿ ಆಗಿತ್ತು. ನೌಷದ್ ಪತ್ತೆಗೂ ಎನ್​ಐಎ 2 ಲಕ್ಷ ರೂ. ರಿವಾರ್ಡ್ ಘೋಷಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಒಂದು ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದು ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ದ ರೊಚ್ಚಿಗೇಳುವಂತೆ ಆಗಿತ್ತು ಅವತ್ತಿನ ಸ್ಥಿತಿ. ಎನ್​ಐಎ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ತನಿಖೆ ನಡೆಸುತ್ತಿದ್ದು, 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈವರೆಗೆ 20 ಜನರನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us